Webdunia - Bharat's app for daily news and videos

Install App

ರೈತರ ಬಗ್ಗೆ ಮಾತನಾಡುವಾಗ ಎಚ್ಚರವಿರಬೇಕು: ಆರ್ ಅಶೋಕ

Krishnaveni K
ಶುಕ್ರವಾರ, 5 ಸೆಪ್ಟಂಬರ್ 2025 (13:23 IST)
ಬೆಂಗಳೂರು: ರೈತರ ಬಗ್ಗೆ ಮಾತನಾಡುವಾಗ ಮೈಮೇಲೆ ಎಚ್ಚರ ಇಟ್ಟುಕೊಂಡು ಮಾತನಾಡಬೆಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಗೆ ವಿಪಕ್ಷ ನಾಯಕ ಆರ್ ಅಶೋಕ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ನೀವು ಧಿಕ್ಕಾರ ಕೂಗುವುದು ಬಿಟ್ಟು ಏನೂ ಮಾಡಕ್ಕಾಗಲ್ಲ ಎಂದು ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದರು. ಇದರ ಬಗ್ಗೆ ಅಶೋಕ್ ಪ್ರತಿಕ್ರಿಯಿಸಿದ್ದಾರೆ. ‘ನಿನ್ನೆ ರೈತರ ಬಗ್ಗೆ ಮಾತನಾಡುವಾಗ ಸ್ವಲ್ಪ ಎಚ್ಚರ ಇರಲಿ ಡಿಸಿಎಂ ಡಿಕೆ ಶಿವಕುಮಾರ್  ಅವರೇ, ಈ ಹಿಂದೆ ರೈತರ ಸರಣಿ ಆತ್ಮಹತ್ಯೆ ವಿಷಯ ಬಂದಾಗ "ಎಲ್ಲಿದೆ ಆತ್ಮಹತ್ಯೆ? ಸ್ವಂತಕ್ಕೆ ಆತ್ಮಹತ್ಯೆ ಮಾಡಿಕೊಂಡವರನ್ನೆಲ್ಲಾ ರೈತರು ಅನ್ನೋಕಾಗತ್ತಾ? ಸುಳ್ಳು ಅದೆಲ್ಲಾ." ಎಂದು ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ್ದಿರಿ.

ಈಗ "ರೈತರು ಧಿಕ್ಕಾರ ಕೂಗೋದು ಬಿಟ್ಟು ಬೇರೇನೂ ಮಾಡೋಕ್ಕಾಗಲ್ಲ" ಎಂದು ರೈತರ ಅಸಹಾಯಕರು ಅನ್ನುವ ರೀತಿ ಹೀಯಾಳಿಸಿ ಮಾತನಾಡಿದ್ದೀರಿ.

ಇಡೀ ದೇಶಕ್ಕೆ ಅನ್ನ ನೀಡುವ ರೈತ ಜೀವನವಿಡೀ ತಾನು ಬದುಕುವುದು, ದುಡಿಯುವುದು ಎಲ್ಲವೂ ಇನ್ನೊಬ್ಬರಿಗಾಗಿಯೇ ಹೊರತು ತನ್ನ ಸ್ವಂತಕ್ಕಾಗಿ ಅಲ್ಲ ಶಿವಕುಮಾರ್ ಅವರೇ.

ಕೈಗಾರಿಕೆಗಳಿಗೆ, ರೈಲು, ರಸ್ತೆ, ವಿಮಾನ ನಿಲ್ದಾಣಕ್ಕೆ ಈ ಹಿಂದೆಯೂ ರೈತರ ಬಳಿ ಜಮೀನು ಪಡೆಯಲಾಗಿದೆ. ಹೆಚ್ ಎಂಟಿ ಕಾರ್ಖಾನೆ ಬಂದಾಗ ಸ್ವತಃ ನಮ್ಮ ಕುಟುಂಬ ಕೂಡ ಜಮೀನು ನೀಡಿತ್ತು. ಆದರೆ ತಮ್ಮ ಜೀವನದ ಆಧಾರ ಸ್ತಂಭವಾಗಿರುವ ಜಮೀನನ್ನು ಕಳೆದುಕೊಳ್ಳುತ್ತಿರುವ ರೈತರ ಬಳಿ ಹೇಗೆ ಮಾತನಾಡಬೇಕು, ಯಾವ ರೀತಿ ಸಂವೇದನೆಯಿಂದ ನಡೆದುಕೊಳ್ಳಬೇಕು ಎನ್ನುವ ಕನಿಷ್ಠ ಸೌಜನ್ಯವೂ ಇಲ್ಲದ ತಮ್ಮಂತಹವರು ಮುಂದೊಂದು ದಿನ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿರುವುದು ನಮ್ಮ ನಾಡಿನ ದುರಂತ.

ರೈತರ ಕಷ್ಟ, ಕೃಷಿಯಲ್ಲಿರುವ ಸಮಸ್ಯೆಗಳ ಬಗ್ಗೆ ಗೊತ್ತಿರುವ ನಿಜವಾದ ಒಕ್ಕಲಿಗ ಅನ್ನದಾತರ ಬಗ್ಗೆ ಈ ರೀತಿಯ ದರ್ಪದ ಮಾತುಗಳನ್ನು ಎಂದಿಗೂ ಆಡುವುದಿಲ್ಲ. ಒಕ್ಕಲಿಕೆಯನ್ನು, ಮಣ್ಣಿನ ಮಕ್ಕಳನ್ನು ಅಪಮಾನ ಮಾಡುತ್ತಿರುವ ತಮ್ಮ ಈ ದುರ್ನಡತೆಯ ಪರಿಣಾಮ ಮುಂದೆ ಗೊತ್ತಾಗಲಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳ: ಸಾರ್ವತ್ರಿಕ ಚುನಾವಣೆಗೆ ಮುಹೂರ್ತ ಫಿಕ್ಸ್‌

ದೆಹಲಿಯಲ್ಲಿ ಮನಗೆಲ್ಲುತ್ತಿದೆ ಕರಾವಳಿಯ ಸಿಗ್ನೇಚರ್ ಖಾದ್ಯಗಳು

ಹಾಸನ ದುರಂತ: ಗಾಯಾಳುಗಳನ್ನು ಭೇಟಿಯಾಗಿ, ಪರಿಹಾರ ಘೋಷಿಸಿದ ದೇವೇಗೌಡ

ವಿಪಕ್ಷಗಳ ಟೀಕೆಗಳ ಮಧ್ಯೆ ಮಣಿಪುರದ ಮಂದಿಗೆ ಧೈರ್ಯ ತುಂಬಿದ ಪ್ರಧಾನಿ ಮೋದಿ

ಮುಂಬೈ ಹೈಕೋರ್ಟ್‌ ಬೆನ್ನಲ್ಲೇ ದೆಹಲಿ ತಾಜ್ ಪ್ಯಾಲೇಸ್ ಹೊಟೇಲ್‌ಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments