Webdunia - Bharat's app for daily news and videos

Install App

ಸಾರಿಗೆ ನೌಕರರಿಗೆ ಸಂಬಳ ಕಟ್, ರೈತರಿಗೆ ಲಾಟಿ ಏಟು ಇದು ಯಾವ ನ್ಯಾಯ: ಆರ್ ಅಶೋಕ್

Krishnaveni K
ಗುರುವಾರ, 7 ಆಗಸ್ಟ್ 2025 (10:41 IST)
ಬೆಂಗಳೂರು: ಮುಷ್ಕರ ಮಾಡಿದ ಸಾರಿಗೆ ನೌಕರರಿಗೆ ಸಂಬಳ ಕಟ್ಟು; ರಸಗೊಬ್ಬರ ಕೇಳಿದ ರೈತರಿಗೆ ಲಾಟಿ ಏಟು, ಇದು ಯಾವ ನ್ಯಾಯ? ಎಂದು ವಿಪಕ್ಷ ನಾಯಕ ಆರ್ ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮೊನ್ನೆ ಕೆಎಸ್ ಆರ್ ಟಿಸಿ ಮುಷ್ಕರದಲ್ಲಿ ಪಾಲ್ಗೊಂಡ ನೌಕರರಿಗೆ ಸರ್ಕಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿದ್ದಲ್ಲದೆ 1 ದಿನದ ವೇತನ ಕಡಿತ ಮಾಡಿರುವ ಬಗ್ಗೆ ಆರ್ ಅಶೋಕ್ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

‘ಲಾಟರಿ ಸಿಎಂ ಸಿದ್ದರಾಮಯ್ಯನವರೇ, ನಮ್ಮದು ಕಾರ್ಮಿಕರ ಪರವಾದ ಸರ್ಕಾರ, ರೈತರ ಪರವಾದ ಸರ್ಕಾರ ಎಂದು ಬೊಗಳೆ ಬಿಡುತ್ತಿರಲ್ಲ, ಇದೇನಾ ಕಾರ್ಮಿಕರನ್ನು, ರೈತರನ್ನು ನಿಮ್ಮ ಕಾಂಗ್ರೆಸ್ ನಡೆಸಿಕೊಳ್ಳುವ ಪರಿ?

ನಿಮ್ಮ 'ನ್ಯಾಯ ಯೋಧ' ರಾಹುಲ್ ಗಾಂಧಿಯವರು ಕಂಡುಕಂಡಲ್ಲೆಲ್ಲ ಪ್ರದರ್ಶನ ಮಾಡುವ ಸಂವಿಧಾನದಲ್ಲಿ ಸಾರಿಗೆ ನೌಕರರಿಗೆ ಮುಷ್ಕರ ಮಾಡುವ ಹಕ್ಕಿಲ್ಲವಾ? ನಿಮ್ಮ ರಾಹುಲ್ ಗಾಂಧಿ ಅವರು ಪ್ರದರ್ಶನ ಮಾಡುವ ಸಂವಿಧಾನದಲ್ಲಿ ರೈತರಿಗೆ ರಸಗೊಬ್ಬರ ಕೇಳುವ ಹಕ್ಕು ಇಲ್ಲವಾ?

ಅಧಿಕಾರ ಯಾರಿಗೂ ಶಾಶ್ವತ ಅಲ್ಲ ಸಿದ್ದರಾಮಯ್ಯನವರೇ. ಈ ಹಿಟ್ಲರ್ ಧೋರಣೆ ಬಿಡಿ. ನಿಮ್ಮ ಕೈಲಾದರೆ ಕಾರ್ಮಿಕರು, ರೈತರ ಹಿತಾಸಕ್ತಿ ಕಾಪಾಡುವ ಕೆಲಸ ಮಾಡಿ. ನಿಮ್ಮ ಕೈಯಲ್ಲಿ ಆಗುವುದಿಲ್ಲ ಎಂದಾದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ’ ಎಂದು ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments