Webdunia - Bharat's app for daily news and videos

Install App

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

Krishnaveni K
ಶನಿವಾರ, 26 ಜುಲೈ 2025 (09:49 IST)
ಬೆಂಗಳೂರು: ನಮ್ಮ ತಂದೆ ಮೈಸೂರು ಅಭಿವೃದ್ಧಿ ವಿಚಾರದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಗಿಂತಲೂ ಗ್ರೇಟ್ ಎಂದಿದ್ದ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರಗೆ ಬಿಜೆಪಿ ನಾಯಕ ಆರ್ ಅಶೋಕ್ ಟಾಂಗ್ ಕೊಟ್ಟಿದ್ದಾರೆ. ಒಡೆಯರ್ ಎಲ್ಲಿ ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಎಲ್ಲಿ ಎಂದು ಲೇವಡಿ ಮಾಡಿದ್ದಾರೆ.
ಟ್ವೀಟ್ ಮೂಲಕ ಯತೀಂದ್ರ ಹೇಳಿಕೆಗೆ ಟಾಂಗ್ ಕೊಟ್ಟಿರುವ ಆರ್ ಅಶೋಕ್ ಮೈಸೂರು ಅರಸರಿಗೆ ಸಿದ್ದರಾಮಯ್ಯನವರನ್ನು ಹೋಲಿಕೆ ಮಾಡಿ ಅವಮಾನ ಮಾಡಿದ್ದಕ್ಕೆ ಯತೀಂದ್ರ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ.
ಮಹಾತ್ಮ ಗಾಂಧಿ ಅವರ ಕೈಯಲ್ಲಿ ರಾಜರ್ಷಿ ಎಂಬ ಬಿರಿದು ಪಡೆದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೆಲ್ಲಿ, ಅಧಿಕಾರಕ್ಕಾಗಿ ನಕಲಿ ಗಾಂಧಿಗಳ ಗುಲಾಮಗಿರಿ ಮಾಡುತ್ತಿರುವ ಸಿದ್ದರಾಮಯ್ಯ ಅವರೆಲ್ಲಿ?
ನಾಲ್ವಡಿ ಭೂಪ ಮನೆ ಮನೆ ದೀಪ ಎಂದು ಶತಮಾನದ ನಂತರವೂ ಕನ್ನಡಿಗರು ದಿನನಿತ್ಯ ನೆನೆದುಕೊಳ್ಳುವ ರೀತಿ ಜನ ಮನ್ನಣೆ ಗಳಿಸಿದ್ದ ಅಭಿವೃದ್ಧಿಯ ಹರಿಕಾರರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೆಲ್ಲಿ, ಕರ್ನಾಟಕದ ಪ್ರತಿ ಮನೆಯ ಮೇಲೂ ಸಾಲದ ಹೊರೆ ಹೊರಿಸಿ, ಕರ್ನಾಟಕವನ್ನು ಅಭಿವೃದ್ಧಿ ಶೂನ್ಯ ಮಾಡಿರುವ ಸಿದ್ದರಾಮಯ್ಯ ಅವರೆಲ್ಲಿ?

ಶತಮಾನದ ಹಿಂದೆಯೇ ಮೈಸೂರು ವಿಶ್ವವಿದ್ಯಾಲಯ ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೆಲ್ಲಿ, ಅನುದಾನ ಕೊಡಲಾಗದೆ 9 ವಿಶ್ವವಿದ್ಯಾಲಯಗಳನ್ನು ಮುಚ್ಚುತ್ತಿರುವ ಸಿದ್ದರಾಮಯ್ಯ ಅವರೆಲ್ಲಿ?

ತಮ್ಮ ಮನೆಯ ಚಿನ್ನಾಭರಣ ಮಾರಿ KRS ಡ್ಯಾಂ ಕಟ್ಟಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೆಲ್ಲಿ, ಜನಸಾಮಾನ್ಯರಿಗೆ ಸಿಗಬೇಕಾಗಿದ್ದ 14 ಸೈಟು ಕಬಳಿಸಿದ ಸಿದ್ದರಾಮಯ್ಯ ಅವರೆಲ್ಲಿ?
 
ಭದ್ರಾವತಿ ಉಕ್ಕಿನ ಕಾರ್ಖಾನೆ, ಮೈಸೂರು ಸ್ಯಾಂಡಲ್ ಸೋಪು ಫ್ಯಾಕ್ಟರಿ, ಮೈಸೂರು ಪೇಪರ್ ಮಿಲ್ಸ್, ಮೈಸೂರು ಪೇಂಟ್ಸ್ ಅಂಡ್ ವಾರ್ನಿಷಸ್, ಹೀಗೆ ಸಾಲು ಸಾಲು ಕೈಗಾರಿಕೆಗಳನ್ನು ಸ್ಥಾಪಿಸಿದ ನಾಲ್ವಡಿ ಅವರೆಲ್ಲಿ, ಕೈಗಾರಿಕೆಗಳು, ಉದ್ಯಮಿಗಳು, ಹೂಡಿಕೆದಾರರು ರಾಜ್ಯದಿಂದ ವಿಮುಖವಾಗಿವಂತೆ ಮಾಡಿರುವ ಸಿದ್ದರಾಮಯ್ಯ ಅವರೆಲ್ಲಿ?
 
ಶತಮಾನದ ಹಿಂದೆಯೇ ಮೊಟ್ಟ ಮೊದಲ ಬಾರಿಗೆ ಹಿಂದುಳಿದವರಿಗೆ ಮೀಸಲಾತಿ ಕೊಟ್ಟ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸಾಮಾಜಿಕ ನ್ಯಾಯದ ಬದ್ಧತೆ ಎಲ್ಲಿ, ಜಾತಿ ಸಮೀಕ್ಷೆ ಹೆಸರಿನಲ್ಲಿ ಬೇಕಾಬಿಟ್ಟಿ ಬಾಗಿಲಿಗೆ ಸ್ಟಿಕರ್ ಅಂಟಿಸುವ ಸಿದ್ದರಾಮಯ್ಯ ಅವರ ಬದ್ಧತೆ ಎಲ್ಲಿ?
 
ವಿಧಾನ ಪರಿಷತ್ ಸದಸ್ಯ ಶ್ರೀ ಯತೀಂದ್ರ ಅವರೇ, ನಿಮ್ಮ ತಂದೆ ಸಿಎಂ ಸಿದ್ದರಾಮಯ್ಯ ಅವರ ಬಗ್ಗೆ ನಿಮಗೆ ಅಭಿಮಾನ ಇರುವುದು ತಪ್ಪಲ್ಲ. ಆದರೆ ನಮ್ಮ ನಾಡು ಕಂಡ ಧೀಮಂತ ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರೊಂದಿಗೆ ನಿಮ್ಮ ತಂದೆಯನ್ನು ಹೋಲಿಸುವುದು ಹಾಸ್ಯಾಸ್ಪದ, ಅಸಂಬದ್ಧ ಮತ್ತು ಅದು ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಮಾಡುವ ಘೋರ ಅಪಮಾನ.
 
ನಿಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಇದ್ದರೆ, ಮೈಸೂರು ರಾಜಮನೆತನದ ಬಗ್ಗೆ ಗೌರವ ಇದ್ದರೆ, ಈ ಕೊಡಲೇ ತಮ್ಮ ಅಸಂಬದ್ಧ ಹೇಳಿಕೆಯನ್ನ ವಾಪಸ್ಸು ಪಡೆದು ನಾಡಿನ ಜನತೆಯ ಬಳಿ ಕ್ಷಮೆ ಕೇಳಿ ಎಂದು ಆರ್ ಅಶೋಕ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿವನ ಹಾಡು ಹಾಡುವ ಈ ಮಗುವಿನ ವಿಡಿಯೋ ನೋಡಿದ್ರೆ ನಗು ಬರುತ್ತೆ

Karnataka Rains: ವೀಕೆಂಡ್ ನಲ್ಲಿ ಮಳೆ ಬರಲಿದೆಯಾ ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮುಂದಿನ ಸುದ್ದಿ
Show comments