ವೋಟ್ ಚೋರಿ ಎಂದು ಊರು ತುಂಬಾ ಹೇಳಿಕೊಂಡು ಬರುವ ರಾಹುಲ್ ಗಾಂಧಿ ಈಗೇನಂತಾರೆ: ಆರ್ ಅಶೋಕ

Krishnaveni K
ಬುಧವಾರ, 17 ಸೆಪ್ಟಂಬರ್ 2025 (11:17 IST)
ಬೆಂಗಳೂರು: ಊರು ತುಂಬಾ ಬಿಜೆಪಿ, ಚುನಾವಣಾ ಆಯೋಗ ಮತಗಳ್ಳತನ ಮಾಡುತ್ತಿದೆ ಎಂದು ಹೇಳಿಕೊಂಡು ಓಡಾಡುವ ರಾಹುಲ್ ಗಾಂಧಿ ಈಗ ಕಾಂಗ್ರೆಸ್ ಶಾಸಕ ನಂಜೇಗೌಡ ವಿಚಾರದಲ್ಲಿ ಏನಂತಾರೆ ಎಂದು ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ ಮಾಡಿದ್ದಾರೆ.

ಮಾಲೂರು ಕ್ಷೇತ್ರದ ಶಾಸಕ ನಂಜೇಗೌಡ ಆಯ್ಕೆ ಅಸಿಂಧು ಎಂದು ಕೋರ್ಟ್ ತೀರ್ಪು ನೀಡಿದೆ. ಮಾಲೂರು ಕ್ಷೇತ್ರದ ಮತಗಳ ಮರು ಎಣಿಕೆಗೆ ಆದೇಶ ನೀಡಿದೆ. ಅಲ್ಲದೆ ಜಿಲ್ಲಾ ಚುನಾವಣಾಧಿಕಾರಿ ವಿರುದ್ಧವೂ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

ಈ ಬಗ್ಗೆ ಟೀಕಾ ಪ್ರಹಾರ ನಡೆಸಿರುವ ಆರ್ ಅಶೋಕ್ ‘ಕಾಂಗ್ರೆಸ್ ಪಕ್ಷ = ಮತಗಳ್ಳತನದ ಮಾಫಿಯಾ. ಸಿದ್ದರಾಮಯ್ಯನವರನ್ನ 1999ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಸೋಲಿಸಿತು, 2018 ರಲ್ಲಿ ಸಿದ್ದರಾಮಯ್ಯನವರು ಬಾದಾಮಿಯಲ್ಲಿ ಹೇಗೆ ಗೆದ್ದರು ಎನ್ನುವುದಕ್ಕೆ ಮಾಲೂರು ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ಚುನಾವಣಾ ಅಕ್ರಮವೇ ಉದಾಹರಣೆ.

ಇವಿಎಂಗಳಂತಹ ಆಧುನಿಕ ತಂತ್ರಜ್ಞಾನ ಬಂದಮೇಲೆ ಕೂಡ ಕಾಂಗ್ರೆಸ್ ಪಕ್ಷ ಇಂತಹ ಚುನಾವಣಾ ಅಕ್ರಮ ಮಾಡುತ್ತದೆ ಎಂದರೆ, ಮತಪೆಟ್ಟಿಗೆ ಇದ್ದ ಕಾಲದಲ್ಲಿ ಕಾಂಗ್ರೆಸ್ ಪಕ್ಷ ಹೇಗೆ ಚುನಾವಣೆಗಳನ್ನು ಗೆಲ್ಲುತ್ತಿತ್ತು ಎನ್ನುವುದನ್ನ ನೀವೇ ಊಹಿಸಿಕೊಳ್ಳಿ.

ರಾಜ್ಯದಲ್ಲಿ ಈಗ ಇರುವುದು ಜನಾದೇಶದಿಂದ ಚುನಾಯಿತವಾದ ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments