Webdunia - Bharat's app for daily news and videos

Install App

ಜ್ಯಾನವ್ಯಾಪಿ ಮಸೀದಿಗೆ ಸಂಬಂಧವಿದೆ ಎಂದ ಆರ್‌. ಅಶೋಕ್‌!

geetha
ಮಂಗಳವಾರ, 20 ಫೆಬ್ರವರಿ 2024 (18:03 IST)
ರಾಮನಗರ :  ವಕೀಲರ ಮೇಲೆ ಪೊಲೀಸರು ಎಫ್‌ಐಆರ್‌ ದಾಖಲಿಸಿರುವ ಪ್ರಕರಣಕ್ಕೆ ರಾಜಕೀಯ ತಿರುವು ದೊರೆಕಿದೆ. ಎಸ್‌ಡಿಪಿಐ ಕಾರ್ಯಕರ್ತ ಹಾಗೂ ವಕೀಲ ಚಾಂದಾಪಾಷಾ ಗ್ಯಾನವ್ಯಾಪಿ ಮಸೀದಿಯ ಬಗ್ಗೆ ಆಕ್ಷೇಪಾರ್ಹ ಪೋಸ್ಟ್‌ ಹಾಕಿ ಬಂಧಿತನಾಗಿದ್ದ. ಈಗನ ಆತನ ಕಡೆಯವರ ಕುಮ್ಮಕ್ಕಿನಿಂದ ಸುಳ್ಳು ದೂರು ನೀಡಲಾಗಿದೆ ಎಂದು ಬಿಜೆಪಿ ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಆರೋಪಿಸಿದ್ದಾರೆ.ಇಂದು ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರೊಂದಿಗೆ ಪ್ರತಿಭಟನಾ ಸ್ಥಳಕೆ ಭೇಟಿ ನೀಡಿ ವಕೀಲರೊಂದಿಗೆ ಚರ್ಚೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಎಸ್ಡಿಪಿಐ ಕಾರ್ಯಕರ್ತ ಚಾಂದ್ ಪಾಷಾನನ್ನು ಪೊಲೀಸರು ಬಂಧಿಸಿದ್ದ ಪ್ರಕರಣದ ವಿರುದ್ಧ ಸೇಡು ತೀರಿಸಿಕೊಳ್ಳಲು   ಸುಳ್ಳು ದೂರಿನ ಆಧಾರದ ಮೇಲೆ ರಾಮನಗರದ ಐಜೂರು ಪೊಲೀಸ್ ಠಾಣೆ ಪಿಎಸ್ ಐ ತನ್ವೀರ್ ವಕೀಲರ ಸಂಘದ 40 ವಕೀಲರ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಈ ಘಟನೆ ಅತ್ಯಂತ ಖಂಡನೀಯ ಎಂದಿರುವ ಆರ್‌. ಅಶೋಕ್‌, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ‌ ನೇತೃತ್ವದ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರಿಗೆ ರೆಕ್ಕೆ ಬಂದಂತಾಗಿದೆ ಎಂದು ಟೀಕಿಸಿದ್ದಾರೆ.
 
ಜೊತೆಗೆ, ಗೃಹಸಚಿವ ಜಿ. ಪರಮೇಶ್ವರ್‌  ಅವರು ಈ ಕೂಡಲೇ ಪಿಸ್ ಐ ತನ್ವೀರ್ ಅವರನ್ನು ಅಮಾನತು ಮಾಡಬೇಕು. ರಾಮನಗರದ ವಕೀಲರ ಮೇಲೆ ದಾಖಲಿಸಿರುವ ಸುಳ್ಳು FIR ವಜಾ ಮಾಡಬೇಕು. ಪೊಲೀಸ್ ಅಧಿಕಾರಗಳು ಸಮಾಜ ಘಾತುಕ ಶಕ್ತಿಗಳ ಏಜೆಂಟರಂತೆ ವರ್ತಿಸದಂತೆ ಖಡಕ್ ಎಚ್ಚರಿಕೆ ನೀಡಬೇಕು ಎಂದು ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments