Webdunia - Bharat's app for daily news and videos

Install App

ರಫೆಲ್ ಡೀಲ್: ಸಿಪಿಐ ಪ್ರತಿಭಟನೆ

Webdunia
ಬುಧವಾರ, 24 ಅಕ್ಟೋಬರ್ 2018 (17:00 IST)
ರಫೆಲ್ ಹಗರಣದ ತನಿಖೆಯನ್ನು ಸಂಸದೀಯ ಜಂಟಿ ಸಮಿತಿಗೆ ಒಪ್ಪಿಸಲು ಆಗ್ರಹಿಸಿ ಸಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕಲಬುರಗಿಯಲ್ಲಿ ಸಿಪಿಐ ಕಾರ್ಯಕರ್ತರು ಹಕ್ಕೊತ್ತಾಯ ಚಳುವಳಿ ಮಾಡಿದರು. ದೇಶದ ಬಹುದೊಡ್ಡ ಹಗರಣದಲ್ಲೊಂದಾದ ರಫೆಲ್ ಹಗರಣ ತನಿಖೆಗಾಗಿ ಸಂಸದೀಯ ಜಂಟಿ ಸಮಿತಿಗೆ ಒಪ್ಪಿಸಬೇಕೆಂದು ಒತ್ತಾಯಿಸಿದರು. ರಾಷ್ಟ್ರವ್ಯಾಪ್ತಿ ಸಿಪಿಐ ಪಕ್ಷದ ನೇತೃತ್ವದಲ್ಲಿ ಹಕ್ಕೊತ್ತಾಯ ಚಳುವಳಿ ನಡೆದಿದ್ದು, ಈ ಹಿನ್ನಲೆ ಕಲಬುರಗಿಯಲ್ಲಿ ರೈಲ್ವೆ ನಿಲ್ದಾನ ಬಳಿಯ ಅಂಚೆ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು.

'ನಾನು ತಿನ್ನುವದಿಲ್ಲ ತಿನ್ನಲು ಬಿಡುವದಿಲ್ಲ' ಅಂತ ಹೇಳುತ್ತಲೇ ಯುದ್ಧ ವಿಮಾನಗಳ ಖರೀದಿಯಲ್ಲಿ ಭಾರಿ ಭ್ರಷ್ಟಾಚಾರವೆಸಗಿದ್ದಾರೆಂದು ಆರೋಪಿಸಿದರು. ಜನರು ಕಟ್ಟಿದ ತೆರಿಗೆಯನ್ನು ಭ್ರಷ್ಟಾಚಾರದ ಮೂಲಕ ಕೊಳ್ಳೆ ಹೊಡೆಯಲಾಗಿದೆ ಈ ಬಗ್ಗೆ ತನಿಖೆ ನಡೆದು ಹಗರಣ ಬಯಲಿಗೆಳೆಯಬೇಕೆಂದು ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments