Webdunia - Bharat's app for daily news and videos

Install App

ಆಡಳಿತಾಧಿಕಾರಿ ನೇಮಕ: ಸರಕಾರದ ನಡೆಗೆ ರಾಘವೇಶ್ವರ್ ಶ್ರೀ ಆಕ್ರೋಶ

Webdunia
ಶನಿವಾರ, 8 ಅಕ್ಟೋಬರ್ 2016 (12:08 IST)
ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಮೇಲೆ ನಿರಂತರವಾಗಿ ಆಕ್ರಮಣ ಮಾಡಲಾಗಿದೆ. ಆಕ್ರಮಣ, ದೌರ್ಜನ್ಯ ಸಹಿಸಿಕೊಂಡಿದ್ದೇನೆ. ಆದರೆ, ಮಠದ ಮೇಲಿನ ದೌರ್ಜನ್ಯ ಸಹಿಸುವುದಿಲ್ಲ ಎಂದು ರಾಮಚಂದ್ರಾಪುರ ಮಠದ ಮಠಾಧೀಶರಾದ ರಾಘವೇಶ್ವರ್ ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.
 
ರಾಜ್ಯ ಸರಕಾರ ವಿನಾಕಾರಣ ಮಠದ ವಿರುದ್ಧ ಷಡ್ಯಂತ್ರ ನಡೆಸುತ್ತಿದೆ. ಎಲ್ಲಾ ಮಠಗಳನ್ನು ಬಿಟ್ಟು ಸರಕಾರದ ಕಣ್ಣಿಗೆ ನಮ್ಮ ಮಠ ಮಾತ್ರ ಕಂಡುಬರುತ್ತಿದೆ. ರಾಮಚಂದ್ರಾಪುರ ಮಠದಲ್ಲಿ ಲೆಕ್ಕಪತ್ರಗಳ ಪಾರದರ್ಶಕವಾಗಿವೆ. ಸರಕಾರಕ್ಕೆ ಸಂದೇಹವಿದ್ದರೇ ಭಕ್ತರ ಅಭಿಪ್ರಾಯ ಪಡೆಯಲಿ ಎಂದು ಹೇಳಿದರು.
 
ರಾಜ್ಯ ಸರಕಾರಕ್ಕೆ ವಿಪಕ್ಷಗಳು ಅಷ್ಟು ಕಿರುಕುಳ ನೀಡುತ್ತಿಲ್ಲ. ಅಷ್ಟು ಕಿರುಕುಳ ಸರಕಾರ ನಮಗೆ ನೀಡುತ್ತಿದೆ. ಈ ಕೂಡಲೇ ರಾಜ್ಯ ಸರಕಾರ ತನ್ನ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಶ್ರೀಗಳು ಆಗ್ರಹಿಸಿದ್ದಾರೆ.
 
ರಾಮಚಂದ್ರಾಪುರ ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರವನ್ನು ಖಂಡಿಸಿ ಶಿವಮೊಗ್ಗ ಜಿಲ್ಲೆಯ ಹೊಸನಗರದ  ರಾಮಚಂದ್ರಾಪುರ ಮಠದಲ್ಲಿ ರಾಘವೇಶ್ವರ್ ಶ್ರೀಗಳ ನೇತೃತ್ವದಲ್ಲಿ ಧರಣಿ ನಡೆಯುತ್ತಿದೆ. ಧರಣಿಯಲ್ಲಿ ನೂರಾರು ಭಕ್ತರ ಪಾಲ್ಗೊಂಡಿದ್ದು, ಇಂದು ಸಂಜೆಯವರೆಗೂ ಮೌನ ಧರಣಿ ನಡೆಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ಮುಂದಿನ ಸುದ್ದಿ
Show comments