ರಾಮಕಥಾ ಗಾಯಕಿ ಪ್ರೇಮಲತಾ ಮೇಲೆ ರಾಘವೇಶ್ವರ ಶ್ರೀಗಳು ಅತ್ಯಾಚಾರ ನಡೆಸಿರುವ ಪ್ರಕರಣ ಕುರಿತಂತೆ ಸಿಐಡಿ ಅಧಿಕಾರಿಗಳು ಹೈಕೋರ್ಟ್ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.
ಸ್ಥಳೀಯ ನ್ಯಾಯಾಲಯ ರಾಘವೇಶ್ವರ್ ಶ್ರೀಗಳನ್ನು ಅತ್ಯಾಚಾರದ ಆರೋಪದಿಂದ ಮುಕ್ತಗೊಳಿಸಿದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಮೇಲ್ಮನವಿ ಸಲ್ಲಿಸಿದ್ದಾರೆ.
ಸಿಐಡಿ ಅಧಿಕಾರಿಗಳು ಸಲ್ಲಿಸಿದ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿರುವ ಏಕಸದಸ್ಯ ಪೀಠ, ಬೇಸಿಗೆ ನಂತರ ವಿಚಾರಣೆ ಆರಂಭಿಸುವುದಾಗಿ ತಿಳಿಸಿದೆ.
ರಾಮಕಥಾ ಗಾಯಕಿ ಪ್ರೇಮಲತಾ ಮೇಲೆ ರಾಘವೇಶ್ವರ್ ಶ್ರೀಗಳು ಅತ್ಯಾಚಾರವೆಸಗಿದ ಆರೋಪ ರಾಜ್ಯದಾದ್ಯಂತ ಕುತೂಹಲಕ್ಕೆ ಕಾರಣವಾಗಿತ್ತು.ಆದರೆ, ಸ್ಥಳೀಯ ನ್ಯಾಯಾಲಯ ಅವರನ್ನು ಆರೋಪದಿಂದ ಮುಕ್ತಗೊಳಿಸಿರುವುದನ್ನು ಸ್ಮರಿಸಬಹುದು.