Webdunia - Bharat's app for daily news and videos

Install App

ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮನ: ವಿದ್ಯಾರ್ಥಿಗಳ ಜತೆ ಸಂವಾದ

Webdunia
ಬುಧವಾರ, 25 ನವೆಂಬರ್ 2015 (13:15 IST)
ಕಾಂಗ್ರೆಸ್ ಉಪಾಧ್ಯಕ್ಷ  ರಾಹುಲ್ ಗಾಂಧಿ ಅವರು ಬೆಂಗಳೂರು ಭೇಟಿ ಸಲುವಾಗಿ ವಿಮಾನನಿಲ್ದಾಣಕ್ಕೆ ಆಗಮಿಸಿದಾಗ ಅವರನ್ನು  ಸಿಎಂ ಸಿದ್ದರಾಮಯ್ಯ, ಮೋಟಮ್ಮ, ಜಾರ್ಜ್, ವೀರಪ್ಪ ಮೊಯ್ಲಿ ಮುಂತಾದ ಗಣ್ಯರು ಅದ್ಧೂರಿ ಸ್ವಾಗತ ನೀಡಿದರು.  ವಿದ್ಯಾರ್ಥಿಗಳ ಜತೆ ಸಂವಾದ ಕಾರ್ಯಕ್ರಮಕ್ಕಾಗಿ ರಾಹುಲ್ ಗಾಂಧಿ ಬೆಂಗಳೂರಿಗೆ ಆಗಮಿಸಿದ್ದಾರೆ.  

ಗಾಂಧಿ ಅವರು ಮೌಂಟ್ ಕಾರ್ಮೆಲ್ ಕಾಲೇಜಿಗೆ ಭೇಟಿ ನೀಡಿ,  ಮಧ್ಯಾಹ್ನ 1ಗಂಟೆಯಿಂದ 3ರವರೆಗೆ ಯುವಜನರನ್ನು ರಾಜಕೀಯಕ್ಕೆ ಸೆಳೆಯುವುದಕ್ಕಾಗಿ ಸಂವಾದ ನಡೆಸಿದ ಬಳಿಕ ದೆಹಲಿಗೆ ತೆರಳಿದ್ದಾರೆ.  ವಿಮಾನನಿಲ್ದಾಣದಿಂದ ನೇರವಾಗಿ  ಕುಮಾರಕೃಪಾ ಅತಿಥಿ ಗೃಹಕ್ಕೆ ರಾಹುಲ್ ಗಾಂಧಿ ಆಗಮಿಸಿದರು.

ರಾಹುಲ್ ಗಾಂಧಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಮಂಡ್ಯ ಹಾಗೂ ಹಾವೇರಿಗೆ ಭೇಟಿ ನೀಡಿ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದರು. ಹಾವೇರಿಯಲ್ಲಿ ರೈತರ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು.  ರಾಹುಲ್ ಗಾಂಧಿ ಭೇಟಿ ಮಾಡಿದ ಮೇಲೆ ರಾಜ್ಯಸರ್ಕಾರ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಪರಿಹಾರ ಧನ ಘೋಷಿಸಿತು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments