Webdunia - Bharat's app for daily news and videos

Install App

ಚಾಮುಂಡಿ ಬೆಟ್ಟದಲ್ಲಿ ಪೂಜೆ ಮಾಡುವಾಗ ತಡಬಡಾಯಿಸಿದ ರಾಹುಲ್ ಗಾಂಧಿ

Webdunia
ಶನಿವಾರ, 24 ಮಾರ್ಚ್ 2018 (12:24 IST)
ಮೈಸೂರು: ಮೈಸೂರಿನಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಬಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮೊದಲು ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡದೇವತೆಗೆ ಪೂಜೆ ಸಲ್ಲಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಮತ್ತು ಕೆಸಿ ವೇಣುಗೋಪಾಲ್ ಜತೆಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ರಾಹುಲ್ ಗಾಂಧಿ, ಇಲ್ಲಿ ದೇವಾಲಯದ ಆವರಣದಲ್ಲಿರುವ ಗಣಪತಿ ದೇವರಿಗೆ ಪೂಜೆ ಸಲ್ಲಿಸುವಾಗ ಕೊಂಚ ತಡಬಡಾಯಿಸಿದರು.

ಆರತಿ ಬಳಿಕ ದಕ್ಷಿಣೆ ಎಲ್ಲಿ ಇಡಬೇಕೆಂದು ಗೊಂದಲಕ್ಕೊಳಗಾದ ರಾಹುಲ್ ತಟ್ಟೆಗೆ ಹಾಕದೇ ಪಕ್ಕದಲ್ಲಿ ಹಾಕಿದ್ದರು. ನಂತರ ತಟ್ಟೆಗೆ ಹಾಕಿದರು. ಅರ್ಚಕರು ಕುಂಕುಮ ಹಾಕುವಾಗಲೂ ಕೊಂಚ ತಡಬಡಾಯಿಸಿದ ರಾಹುಲ್ ಗೆ ಸಿಎಂ ಸಹಾಯ ಮಾಡಿದರು. ನಂತರ ಸಿಎಂ ಸೂಚನೆ ಮೇರೆಗೆ ಅಲ್ಲಿದ್ದ ಎಲ್ಲಾ ನಾಯಕರಿಗೂ ಅರ್ಚಕರು ಕುಂಕುಮ ಹಾಕಿದರು.

ಎರಡು ದಿನಗಳ ಹಿಂದೆ ಮಂಗಳೂರಿನ ಕುದ್ರೋಳಿ ದೇವಾಲಯಕ್ಕೆ ಭೇಟಿ ನೀಡಿದ್ದಾಗಲೂ ರಾಹುಲ್ ಕೊಂಚ ಗೊಂದಲಕ್ಕೊಳಗಾಗಿದ್ದರು. ಆರತಿ ಸ್ವೀಕರಿಸಿದ ಮೇಲೆ ಎಡಗೈಯಲ್ಲಿ ದಕ್ಷಿಣೆಯನ್ನು ಸ್ವಲ್ಪ ಅನುಮಾನಿಸುತ್ತಲೇ ಹಾಕಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kannada Viral Video: ಬೆಂಗಳೂರಲ್ಲಿ ಬದುಕಬೇಕೆಂದರೆ ಹಿಂದಿ ಕಲಿ: ಕನ್ನಡಿಗ ಆಟೋ ಚಾಲಕನಿಗೆ ಹಿಂದಿವಾಲ ಧಮ್ಕಿ

Arecanut price today: ಅಡಿಕೆಗೂ ಇಲ್ಲ, ಕಾಳುಮೆಣಸಿಗೂ ಇಲ್ಲ, ಇಂದಿನ ಬೆಲೆ ಎಷ್ಟಾಗಿದೆ ನೋಡಿ

DK Shivakumar: ಡಿಕೆ ಶಿವಕುಮಾರ್ ಭೇಟಿಯಾದ ಯಡಿಯೂರಪ್ಪ ಪುತ್ರ ಸಂಸದ ರಾಘವೇಂದ್ರ: ವಿವಾದ ಮಾಡ್ಬೇಡಿ ಎಂದು ರಿಕ್ವೆಸ್ಟ್

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

ಮುಂದಿನ ಸುದ್ದಿ
Show comments