Select Your Language

Notifications

webdunia
webdunia
webdunia
webdunia

ರಾಜ್ಯದಲ್ಲೂ ಗುಜರಾತ್ ಮಾದರಿಗೆ ಮುಂದಾದ ರಾಹುಲ್ ಗಾಂಧಿ

ರಾಜ್ಯದಲ್ಲೂ ಗುಜರಾತ್ ಮಾದರಿಗೆ ಮುಂದಾದ ರಾಹುಲ್ ಗಾಂಧಿ
ಬೆಂಗಳೂರು , ಶುಕ್ರವಾರ, 9 ಫೆಬ್ರವರಿ 2018 (10:52 IST)
ಹೈದರಾಬಾದ ಕರ್ನಾಟಕದಲ್ಲಿ ಪ್ರವಾಸ ನಡೆಸಲು ಮುಂದಾಗಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯ ವಿಧಾನಸಭೆ ಚುನಾವಣೆಗೆ ಗುಜರಾತ್ ಮಾದರಿಯನ್ನು ಅನುಕರಣೆ ಮಾಡಲಿದ್ದಾರೆ.

ಫೆಬ್ರುವರಿ 10ರಂದು ರಾಜ್ಯಕ್ಕೆ ಬರಲಿರುವ ರಾಹುಲ್ ಗಾಂಧಿ ದೇವಸ್ಥಾನ ಹಾಗೂ ಮಠಗಳಿಗೆ ಭೇಟಿ ನೀಡುವ ಮೂಲಕ ಹಿಂದೂ ಮತಗಳನ್ನು ಸೆಳೆಯಲು ತಂತ್ರ ರೂಪಿಸಿದ್ದಾರೆ. ಇದೇ ವೇಳೆ ವಿವಿಧ ಸ್ವಾಮೀಜಿಗಳ ಭೇಟಿಯೂ ಮಾಡಲಿದ್ದಾರೆ.

ಪ್ರವಾಸದ ವೇಳೆಯಲ್ಲಿ ಸ್ಥಳೀಯ ಜನರೊಂದಿಗೆ ಹಾಗೂ ರೈತರೊಂದಿಗೆ  ಸಂವಾದ ನಡೆಸುವ ಮೂಲಕ ಜನರು  ಒಲವು ಗಳಿಸಲು ಪ್ರಯತ್ನಿಸುತ್ತಾರೆ. ಗುಜರಾತಿನಲ್ಲಿ ದೇವಸ್ಥಾನಗಳ ಭೇಟಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅನುಕೂಲ ಆಗಿದ್ದರಿಂದ ರಾಜ್ಯದಲ್ಲೂ ಗುಜರಾತ್ ಮಾದರಿ ಅನುಸರಿಸುತ್ತಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಚುನಾವಣೆಗಾಗಿ ದೇವೇಗೌಡರು ತೆಗೆದುಕೊಂಡ ಮಹತ್ವದ ನಿರ್ಧಾರ ಏನು ಗೊತ್ತಾ...?