BJP ವಿರುದ್ಧ ರಾಹುಲ್​ ಗಾಂಧಿ ವಾಗ್ದಾಳಿ

Webdunia
ಮಂಗಳವಾರ, 22 ನವೆಂಬರ್ 2022 (18:29 IST)
ಭಾರತ್ ಜೋಡೋ ಯಾತ್ರೆ ವೇಳೆ ರೈತರು, ಯುವಕರು ಮತ್ತು ಬುಡಕಟ್ಟು ಜನಾಂಗದವರನ್ನು ಭೇಟಿಯಾದ ನಂತರ ಅವರ ನೋವು ಏನೆಂಬುದನ್ನು ಅರಿತಿದ್ದೇನೆ. BJP ಅರಣ್ಯವನ್ನು ಕೈಗಾರಿಕೋದ್ಯಮಿಗಳಿಗೆ ಹಸ್ತಾಂತರಿಸುವ ಮೂಲಕ  ಆದಿವಾಸಿಗಳನ್ನು ಸ್ಥಳಾಂತರಿಸುವ ಯೋಜನೆಗಳನ್ನು ರೂಪಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಆರೋಪಿಸಿದ್ದಾರೆ.  ಗುಜರಾತ್​​​ನಲ್ಲಿ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಂತೆಯೇ ಮೊದಲ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಬುಡಕಟ್ಟು ಜನಾಂಗದವರು ದೇಶದ ಮೊದಲ ಮಾಲೀಕರು ಎಂದು ಪ್ರತಿಪಾದಿಸಿದರು. ಆದರೆ BJP ಅವರು ವಾಸಿಸುತ್ತಿರುವ ಅರಣ್ಯ ಪ್ರದೇಶ ತೆಗೆದುಕೊಂಡು ಅವರ ಮಕ್ಕಳನ್ನು ಆಧುನಿಕ ಶಿಕ್ಷಣದಿಂದ ದೂರವಿಡುವ ಕೆಲಸ ಮಾಡುತ್ತಿದೆ ಎಂದರು. ದೇಶದ ಏಕತೆಗಾಗಿ 3,570 ಕಿಮೀ ಯಾತ್ರೆ ನಡೆಸಲಾಗುತ್ತಿದೆ. ಈ ಸಮಯದಲ್ಲಿ ರೈತರು, ಯುವಕರು ಮತ್ತು ಬುಡಕಟ್ಟು ಸಮುದಾಯದ ಜನರ ಸಮಸ್ಯೆಯನ್ನು ಆಲಿಸಿದ ನಂತರ ಅವರ ನೋವನ್ನು ತಾನು ಕೂಡಾ ಅನುಭವಿಸಿರುವುದಾಗಿ ತಿಳಿಸಿದರು. ಈವರೆಗಿನ ಯಾತ್ರೆಯ ಅನುಭವವನ್ನು ಹಂಚಿಕೊಂಡ ಕಾಂಗ್ರೆಸ್ ನಾಯಕ, ರೈತರು, ಯುವಕರು ಮತ್ತು ಬುಡಕಟ್ಟು ಜನಾಂಗದವರೊಂದಿಗೆ ಮಾತನಾಡುವಾಗ ದುಃಖವಾಯಿತು. ರೈತರು ತಮ್ಮ ಉತ್ಪನ್ನಗಳಿಗೆ ಸರಿಯಾದ ದರ, ಬೆಳೆ ವಿಮೆ ಹಣ ಅಥವಾ ಸಾಲ ಮನ್ನಾ ಆಗದೆ ತಮ್ಮ ಅನುಭವವನ್ನು ಹಂಚಿಕೊಂಡರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments