Webdunia - Bharat's app for daily news and videos

Install App

ಪ್ರಜ್ವಲ್ ರೇವಣ್ಣ ಬದಲು ರವಣ್ಣ ಎಂದು ತಪ್ಪಾಗಿ ಉಚ್ಚರಿಸಿದ ರಾಹುಲ್ ಗಾಂಧಿ

Krishnaveni K
ಗುರುವಾರ, 2 ಮೇ 2024 (14:18 IST)
ಶಿವಮೊಗ್ಗ: ಇಂದು ರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶಿವಮೊಗ್ಗದಲ್ಲಿ ಇಂದು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದ ರಾಹುಲ್ ಗಾಂಧಿ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ವಾಗ್ದಾಳಿ ನಡೆಸಿದರು. 400 ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಜ್ವಲ್ ಒಬ್ಬ ಸಾಮೂಹಿಕ ಅತ್ಯಾಚಾರಿ ಎಂದಿದ್ದಾರೆ.

ಈ ಅತ್ಯಾಚಾರಿಗೆ ದೇಶದ ಪ್ರಧಾನ ಮಂತ್ರಿ ಬೆಂಬಲ ನೀಡುತ್ತಾರೆ. ಈ ಅತ್ಯಾಚಾರಿಯ ಪರವಾಗಿ ಪ್ರಧಾನಿ ಮೋದಿ ನಿಮ್ಮ ಬಳಿ ಬೆಂಬಲ ನೀಡುವಂತೆ ಕೇಳಿಕೊಳ್ಳುತ್ತಾರೆ ಎಂದು ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ರೇವಣ್ಣ ಹೆಸರನ್ನು ಅವರು ಪದೇ ಪದೇ ತಪ್ಪಾಗಿ ಉಚ್ಚರಿಸುತ್ತಿದ್ದರು.

ಪ್ರಜ್ವಲ್ ರೇವಣ್ಣ ಎನ್ನುವ ಬದಲು ಪದೇ ಪದೇ ಪ್ರಜ್ವಲ್ ರವಣ್ಣ ಎಂದು ತಪ್ಪಾಗಿ ಉಚ್ಚರಿಸುತ್ತಿದ್ದರು. ಈ ರೀತಿ ಅನೇಕ ಬಾರಿ ರಾಹುಲ್ ಗಾಂಧಿ ತಪ್ಪು ಉಚ್ಚಾರಣೆ ಮೂಲಕ ಟ್ರೋಲ್ ಗೊಳಗಾಗಿದ್ದು ಇದೆ. ಇಂದು ಮತ್ತೆ ಅದೇ ಪ್ರಮಾದವೆಸಗಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಗೀತಾ ಶಿವರಾಜ್ ಕುಮಾರ್ ಪರವಾಗಿ ರಾಹುಲ್ ಗಾಂಧಿ ಮತ ಯಾಚಿಸಿದ್ದಾರೆ. ಸಂಜೆ ರಾಯಚೂರಿನಲ್ಲಿ ಚುನಾವಣಾ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಯಾಚನೆ ಮಾಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ