Publish Date: Sun, 11 Feb 2018 (12:47 IST)
Updated Date: Sun, 11 Feb 2018 (12:49 IST)
ಕೊಪ್ಪಳ: ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ನಿನ್ನೆಯಿಂದ ರಾಜ್ಯದಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೂಡಾ ಮಹದಾಯಿ ವಿವಾದದ ಬಗ್ಗೆ ಚಕಾರವೆತ್ತಿಲ್ಲ.
ರಾಹುಲ್ ನಿನ್ನೆ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದರು. ಈ ವೇಳೆ ಪ್ರಧಾನಿ ಮೋದಿ ಮತ್ತು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹೊರತಾಗಿ ಮಹದಾಯಿ ಸಮಸ್ಯೆ ಬಗ್ಗೆ ತಮ್ಮ ನಿಲುವು ವ್ಯಕ್ತಪಡಿಸಿಲ್ಲ.
ಇದೇ ಕಾರಣಕ್ಕೆ ಇದೀಗ ಬಿಜೆಪಿ ಬೆಂಬಲಿಗರು ಟೀಕಿಸುತ್ತಿದ್ದಾರೆ. ಪ್ರಧಾನಿ ಮೋದಿ ಬಂದಾಗ ಮಹದಾಯಿ ಬಗ್ಗೆ ಮಾತನಾಡಲಿಲ್ಲ ಎಂಬುದನ್ನೇ ದೊಡ್ಡದು ಮಾಡಿದರವರೆಲ್ಲಾ ಎಲ್ಲಿ ಹೋದರು ಎಂದು ಬಿಜೆಪಿ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಕಿಡಿ ಕಾರುತ್ತಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ