Webdunia - Bharat's app for daily news and videos

Install App

ಎನ್‌ಡಿಎ ಸರ್ಕಾರದಿಂದ ರೈತರ ಮೇಲೆ ಅತಿಕ್ರಮಣ– ರಾಹುಲ್ ಗಾಂಧಿ

Webdunia
ಸೋಮವಾರ, 12 ಫೆಬ್ರವರಿ 2018 (09:46 IST)
ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ರೈತರನ್ನು ರಕ್ಷಣೆ ಮಾಡುವ ಯೋಜನೆ ತೆಗೆದುಹಾಕಿ, ರೈತರ ಮೇಲೆ ಅತಿಕ್ರಮಣ ಮಾಡುವ ನೀತಿ ಅನುಸರಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.
 
ಸಿಂಧನೂರಿನಲ್ಲಿ ಜನಾಶೀರ್ವಾದ ಯಾತ್ರೆಯ ನಿಮಿತ್ತ ರೈತರೊಂದಿಗೆ ಸಂವಾದದಲ್ಲಿ ಮಾತನಾಡಿದ ಅವರು, ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ರೈತರ ರಕ್ಷಣೆಗಾಗಿ ಬೆಂಬಲ ಬೆಲೆ ನೀಡುವುದು ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿತ್ತು. ಆದರೆ, ಎನ್‌ಡಿಎ ಸರ್ಕಾರ ಅವೆಲ್ಲವನ್ನೂ ತೆಗೆದುಹಾಕಿದೆ. ರೈತರು ನಿಯತ್ತಿನಿಂದ ಸಂಪಾದಿಸಿದ್ದ ಹಣವನ್ನು ಕಸಿದುಕೊಂಡು ಪರೋಕ್ಷವಾಗಿ ಉದ್ಯಮಿಗಳಿಗೆ ಲಾಭ ಮಾಡಲು ನೋಟು ಅಮಾನ್ಯೀಕರಣ ಜಾರಿಗೊಳಿಸಿದರು. ಉದ್ಯಮಿಗಳು ಹಿಂಬಾಗಿಲಿನಿಂದ ಕಪ್ಪು ಹಣವನ್ನು ಕಾನೂನು ಬದ್ಧ ಮಾಡಿಕೊಂಡಿದ್ದಾರೆ ಎಂದಿದ್ದಾರೆ.
 
ಉದ್ಯಮಿಗಳ ಸಮಸ್ಯೆ ಪರಿಹಾರಕ್ಕೆ ಎನ್‌ಡಿಎ ಸರ್ಕಾರ ಒಂದು ವರ್ಷದಲ್ಲಿ ₹1.5 ಲಕ್ಷ ಕೋಟಿ ಸಾಲ ಮನ್ನಾ ಮಾಡಿದೆ. ಆದರೆ, ರೈತರ ಸಾಲ ಮನ್ನಾ ಮಾಡುತ್ತಿಲ್ಲ. ರೈತರ ಸಾಲ ಏಕೆ ಮನ್ನಾ ಮಾಡುವುದಿಲ್ಲ ಎಂದು ಪ್ರಧಾನಿ ಕಚೇರಿಗೆ ಹೋಗಿ ಪ್ರಶ್ನಿಸಿದರೂ ಉತ್ತರ ಕೊಡಲಿಲ್ಲ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments