ಪ್ರಣಾಳಿಕೆ ಬಿಡುಗಡೆ ಮಾಡುವಾಗ ಹಿರಿಯ ನಾಯಕ ಜನಾರ್ಧನ ಪೂಜಾರಿಗೆ ವಿಶೇಷ ಗೌರವ ಕೊಟ್ಟ ರಾಹುಲ್ ಗಾಂಧಿ

Webdunia
ಶುಕ್ರವಾರ, 27 ಏಪ್ರಿಲ್ 2018 (11:12 IST)
ಮಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಮೂಲ ಕಾಂಗ್ರೆಸ್ಸಿಗರು ಮೂಲೆಗುಂಪಾಗುತ್ತಿದ್ದಾರೆ ಎಂಬ ಅಳಲು ಕೇಳಿಬರುತ್ತಿರುವಂತೆಯೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಿರಿಯ ನಾಯಕ ಜನಾರ್ಧನ ಪೂಜಾರಿಗೆ ವಿಶೇಷ ಗೌರವ ಕೊಟ್ಟಿದ್ದಾರೆ.

ಟಿಎಂಎ ಪೈ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಜನಾರ್ಧನ ಪೂಜಾರಿ ವೇದಿಕೆ ಮೇಲೆ ಉಪಸ್ಥಿತರಿದ್ದರು.

ಪ್ರಣಾಳಿಕೆ ತಯಾರಿ ತಂಡದ ಮುಖ್ಯಸ್ಥ ವೀರಪ್ಪ ಮೊಯಿಲಿ ಹೊತ್ತಗೆಯನ್ನು ರಾಹುಲ್ ಗಾಂಧಿ ಕೈಗಿಡುತ್ತಿದ್ದಂತೇ ರಾಹುಲ್, ತಮಗಿಂತ ಸ್ವಲ್ಪ ದೂರದಲ್ಲಿ ನಿಂತಿದ್ದ ಜನಾರ್ಧನ ಪೂಜಾರಿಯವರನ್ನು ಕರೆದು ತಮಗಿತ್ತ ಪ್ರಣಾಳಿಕೆಯನ್ನು ಅವರ ಕೈಗಿತ್ತರು. ಬಳಿಕ ತಾವು ಇನ್ನೊಂದು ಹೊತ್ತಗೆಯನ್ನು ಕೈಯಲ್ಲಿ ಹಿಡಿದು ಫೋಟೋಗೆ ಪೋಸ್ ನೀಡಿದರು.

ಕಳೆದ ಬಾರಿ ರಾಹುಲ್ ಮಂಗಳೂರಿಗೆ ಪ್ರವಾಸ ಮಾಡಿದ್ದಾಗ ಜನಾರ್ಧನ ಪೂಜಾರಿ ಭಾವುಕರಾಗಿ ರಾಹುಲ್ ರನ್ನು ಬಿಗಿದಪ್ಪಿದ್ದರು. ಈ ಸಂದರ್ಭದಲ್ಲಿ ರಾಹುಲ್ ಕೂಡಾ ಪೂಜಾರಿಯವರನ್ನು ಸಮಾಧಾನಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments