Select Your Language

Notifications

webdunia
webdunia
webdunia
webdunia

ನಾಳೆ ಯಡಿಯೂರಪ್ಪ ತವರಲ್ಲಿ ರಾಹುಲ್ ಗಾಂಧಿ ಶಕ್ತಿಪ್ರದರ್ಶನ

ನಾಳೆ ಯಡಿಯೂರಪ್ಪ ತವರಲ್ಲಿ ರಾಹುಲ್ ಗಾಂಧಿ ಶಕ್ತಿಪ್ರದರ್ಶನ
ಶಿವಮೊಗ್ಗ , ಮಂಗಳವಾರ, 3 ಏಪ್ರಿಲ್ 2018 (09:05 IST)
ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತವರು ಶಿವಮೊಗ್ಗದಲ್ಲಿ ನಾಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಜನಾಶೀರ್ವಾದ ಯಾತ್ರೆ ಕಾರ್ಯಕ್ರಮ ನಡೆಯಲಿದೆ.
 

ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ತವರಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶಕ್ತಿ ಪ್ರದರ್ಶನ ನಡೆಸಿದ್ದರು. ಇದೀಗ ರಾಹುಲ್ ಗಾಂಧಿ ಸರದಿ. ನಾಳೆ ರಾಜ್ಯಕ್ಕೆ ಆಗಮಿಸಲಿರುವ ರಾಹುಲ್, ಬಿಜೆಪಿ ಭದ್ರಕೋಟೆಯಲ್ಲಿ ರೋಡ್ ಶೋ, ಸಮಾವೇಶ ನಡೆಸಲಿದ್ದಾರೆ.

ಈ ಬಾರಿ ರಾಹುಲ್ ಗಾಂಧಿ ರಾಜ್ಯಕ್ಕೆ ಆಗಮಿಸಿದ ವೇಳೆ ಕಾಂಗ್ರೆಸ್ ಟಿಕೆಟ್ ಫೈನಲ್ ಮಾಡುವ ಕೆಲಸಗಳು ನಡೆಯಲಿವೆ. ನಿನ್ನೆಯೇ ಕಾಂಗ್ರೆಸ್ ಉಸ್ತುವಾರಿ ಕೆಸಿ ವೇಣುಗೋಪಾಲ್ ರಾಜ್ಯದ ನಾಯಕರನ್ನು ಒಬ್ಬೊಬ್ಬರಾಗಿ ಕರೆದು ಟಿಕೆಟ್ ಹಂಚಿಕೆ ಕುರಿತು ಮಾತುಕತೆ ನಡೆಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಚಾಮುಂಡೇಶ್ವರಿಯಲ್ಲೇ ಸಿಎಂ ಸಿದ್ದರಾಮಯ್ಯ ರಾಜಕೀಯ ಅಂತ್ಯವಾಗುತ್ತೆ ನೋಡ್ತಿರಿ ಎಂದು ಸವಾಲೆಸೆದ ದೇವೇಗೌಡರು