Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿಯಿಂದ 13ರಂದು ಗಡಿ ಜಿಲ್ಲೆಯಲ್ಲಿ ಲೋಕಸಭೆ ಪ್ರಚಾರ ಶುರು..!?

ರಾಹುಲ್ ಗಾಂಧಿಯಿಂದ 13ರಂದು ಗಡಿ ಜಿಲ್ಲೆಯಲ್ಲಿ ಲೋಕಸಭೆ ಪ್ರಚಾರ ಶುರು..!?
ಬೀದರ್ , ಶನಿವಾರ, 4 ಆಗಸ್ಟ್ 2018 (16:08 IST)
ಆ.13ರಂದು ಕೋಟೆ ನಗರಿ ಬೀದರ್ ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಅಂದು ರಾಹುಲ್ ಗಾಂಧಿಯವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಅಭಿನಂದನಾ ಸಮಾರಂಭವನ್ನ ಹಮ್ಮಿಕೊಳ್ಳಲಾಗಿದೆ.

ಬರುವ ಲೋಕಸಭೆ ಚುನಾವಣೆ ಮೇಲೆ ಕಣ್ಣೀಟ್ಟಿರುವ ಕಾಂಗ್ರೆಸ್ ಪಕ್ಷ ಕರ್ನಾಟಕ ಲೋಕಸಭಾ ಚುನಾವಣೆ ಪ್ರಚಾರಕ್ಕೆ ಬೀದರ್ ನಿಂದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಚಾಲನೆ ನೀಡಲಿದ್ದಾರೆ.

ಅದಕ್ಕಾಗಿ ಭರದ ಸಿದ್ಧತೆ ನಡೆಯುತ್ತಿದೆ ಅನ್ನುತ್ತೆ ಕಾಂಗ್ರೆಸ್ ಮೂಲಗಳು. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಬೀದರ್ ಗೆ ಬಂದ ಸಂದರ್ಭದಲ್ಲಿ ಲೋಕಸಭೆ ಟಿಕೆಟ್ ಆಕಾಂಕ್ಷಿಗಳಾದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸ್ವರಾಜ್ ಜಾಬ್ ಶೆಟ್ಟಿ, ಕಾಂಗ್ರೆಸ್ ಮುಖಂಡ ಆನಂದ ದೇವಪ್ಪಾ ಸೇರಿದಂತೆ ಸ್ಥಳೀಯ ನಾಯಕರು ಮನವಿ ಸಲ್ಲಿಸಲಿದ್ದಾರೆ. ಕರ್ನಾಟಕ ಲೋಕಸಭೆಯ 28 ಸ್ಥಾನಗಳ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್ ಪಕ್ಷ ಅದಕ್ಕಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ 13ರಂದು ಬೀದರ್ ನಿಂದಲೆ ಚುನಾವಣೆ ಪ್ರಚಾರಕ್ಕೆ ನಾಂಧಿ ಹಾಡಲಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಧರ್ಮಪತ್ನಿ ಡಾ.ಗೀತಾ ಈಶ್ವರ ಖಂಡ್ರೆಯವರನ್ನ ಲೋಕಸಭೆ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಬಗ್ಗೆ ಚರ್ಚೆ ನಡೆಯಲಿದೆ ಅನ್ನುತ್ತೆ ಕಾಂಗ್ರೆಸ್ ಮೂಲಗಳು.




Share this Story:

Follow Webdunia kannada

ಮುಂದಿನ ಸುದ್ದಿ

ಪೇಯಿಂಟ್ ತಯಾರಿಕೆ ಘಟಕಕ್ಕೆ ಬೆಂಕಿ