Rahul Gandhi: ಶಿಕ್ಷಣ ಸಂಸ್ಥೆಗಳನ್ನು ಆರ್ ಎಸ್ಎಸ್ ಕಬ್ಜಾ ಮಾಡಿಕೊಂಡಿದೆ, ಹೀಗೇ ಆದ್ರೆ ಉದ್ಯೋಗ ಸಿಗದು

Krishnaveni K
ಮಂಗಳವಾರ, 25 ಮಾರ್ಚ್ 2025 (09:41 IST)
ನವದೆಹಲಿ: ದೇಶದಲ್ಲಿರುವ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಆರ್ ಎಸ್ಎಸ್ ಕಬ್ಜಾ ಮಾಡಿಕೊಂಡಿದೆ. ಹೀಗೇ ಮುಂದುವರಿದರೆ ಮುಂದೆ ಎಲ್ಲಾ ವರ್ಗದವರಿಗೆ ಉದ್ಯೋಗ ಸಿಗದು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿಕೆ ನೀಡಿದ್ದಾರೆ.

ದೆಹಲಿಯ ಜಂತರ್ ಮಂತರ್ ನಲ್ಲಿ ನಡೆದ ಕಾಂಗ್ರೆಸ್ ಬೆಂಬಲಿತ ವಿದ್ಯಾರ್ಥಿ ಸಂಘವೊಂದರ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿರುವ ಅವರು ಆರ್ ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ದೇಶದ ಎಲ್ಲಾ ಶಿಕ್ಷಣ ಸಂಸ್ಥೆಗಳ ಚುಕ್ಕಾಣಿ ಆರ್ ಎಸ್ಎಸ್ ಕೈಯಲ್ಲಿದೆ. ಇದು ಹೀಗೇ ಮುಂದುವರಿದರೆ ಎಲ್ಲಾ ವರ್ಗದವರಿಗೆ ಉದ್ಯೋಗ, ಶಿಕ್ಷಣ ಸಿಗದು ಎಂದಿದ್ದಾರೆ.

ಆರ್ ಎಸ್ಎಸ್ ತನಗೆ ಬೇಕಾದವರನ್ನು ಉಪಕುಲಪತಿಗಳಾಗಿ ನೇಮಿಸುತ್ತಿದೆ. ಇದರಿಂದ ಯುವಜನರ ಭವಿಷ್ಯ ಅಪಾಯದಲ್ಲಿದೆ. ಆರ್ ಎಸ್ಎಸ್ ಕೇವಲ ಶಿಕ್ಷಣ ವ್ಯವಸ್ಥೆ ಮಾತ್ರವಲ್ಲ, ಇಡೀ ದೇಶಕ್ಕೇ ಆರ್ ಎಸ್ಎಸ್ ಮಾರಕ ಎಂದಿದ್ದಾರೆ.

 ದೇಶದಲ್ಲಿ ಎಲ್ಲಾ ಶಿಕ್ಷಣ ಸಂಸ್ಥೆಗಳೂ ಆರ್ ಎಸ್ಎಸ್ ಕೈ ಸೇರಿದರೆ ಉದ್ಯೋಗ, ಶಿಕ್ಷಣ ಯಾವುದೂ ಎಲ್ಲಾ ವರ್ಗದವರಿಗೆ ಸಿಗದು. ಮೋದಿ ಕೇವಲ ಕೆಲವು ಶ್ರೀಮಂತ ವರ್ಗದವರ ಉದ್ದಾರ ಮಾಡುವುದನ್ನೇ ಯೋಚಿಸುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಗೋವಾ ನೈಟ್‌ಕ್ಲಬ್ ದುರಂತ, ಪರಾರಿಯಾಗಿದ್ದ ಮಾಲಕ ಸಹೋದರರ ವಿಚಾರಣೆ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಮುಂದಿನ ಸುದ್ದಿ
Show comments