Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಹಿಂದೂ ಸಮಾಜದಲ್ಲಿ ಕ್ಷಮೆ ಕೇಳಬೇಕು: ಆರ್. ಅಶೋಕ್ ಆಕ್ರೋಶ

Congress Leader Rahul Gandhi

Sampriya

ಬೆಂಗಳೂರು , ಸೋಮವಾರ, 1 ಜುಲೈ 2024 (17:21 IST)
ಬೆಂಗಳೂರು:  ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮೊದಲ ಭಾಷಣದಲ್ಲಿ ಮೈತ್ರಿಕೂಟದ ನಿಜವಾದ ಬಣ್ಣವನ್ನು ಬಹಿರಂಗಪಡಿಸಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಅವರು ವ್ಯಂಗ್ಯ ಮಾಡಿದರು.

ಇಂದು ಲೋಕಸಭೆಯಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿ, ತಮ್ಮನ್ನು ತಾವು ಹಿಂದೂಗಳೆಂದು ಕರೆಸಿಕೊಳ್ಳುವವರು ಹಿಂಸಾಚಾರದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ವಿವಾದ ಸೃಷ್ಟಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಆರ್‌ ಅಶೋಕ್ ಅವರು, ಈ ಸಂಬಂಧ ರಾಹುಲ್ ಗಾಂಧಿ ಹಿಂದೂ ಸಮಾಜದಲ್ಲಿ ಕ್ಷಮೆಯಾಚನೆ ಮಾಡಬೇಕೆಂದು ಆಗ್ರಹಿಸಿದರು.

ಆರ್‌ ಅಶೋಕ್ ಪೋಸ್ಟ್‌ನಲ್ಲಿ ಹೀಗಿದೆ:  ಲೋಕಸಭೆಯ ಮೊದಲ ಭಾಷಣದಲ್ಲಿ ರಾಹುಲ್ ಗಾಂಧಿ ಅವರ ಮಾತನಾಡಿ ಇಂಡಿಯಾ ಮೈತ್ರಿಕೂಟದ ನಿಜವಾದ ಬಣ್ಣವನ್ನು ಬಹಿರಂಗಪಡಿಸಿದ್ದಾರೆ. ಇಡೀ ಹಿಂದೂ ಸಮುದಾಯವನ್ನು ಹಿಂಸಾತ್ಮಕ ಎಂದು ಹೀಯಾಳಿಸುವುದು ತುಂಬಾ ಖಂಡನೀಯ ಮತ್ತು ಕ್ಷಮಾಪಣೆಯಿಲ್ಲ. ರಾಹುಲ್ ಗಾಂಧಿ ತಮ್ಮ ಅಸಂವೇದನಾಶೀಲ ಹೇಳಿಕೆಗಾಗಿ ಇಡೀ ದೇಶ ಮತ್ತು ಹಿಂದೂ ಸಮುದಾಯದ ಕ್ಷಮೆಯಾಚಿಸಬೇಕು.

Share this Story:

Follow Webdunia kannada

ಮುಂದಿನ ಸುದ್ದಿ

ಕೇರಳದ ವಿವಿಗಳಲ್ಲಿ 4 ವರ್ಷದ ಪದವಿ ಕೋರ್ಸ್‌ಗಳಿಗೆ ಸಿಎಂ ಪಿಣರಾಯಿ ಚಾಲನೆ