Webdunia - Bharat's app for daily news and videos

Install App

Rahul Gandhi: ಹನಿಟ್ರ್ಯಾಪ್ ವಿಚಾರ ಬೀದಿರಂಪ ಮಾಡಿದ್ದಕ್ಕೆ ಸಿದ್ದರಾಮಯ್ಯ ಜೊತೆ ರಾಹುಲ್ ಗಾಂಧಿ ಸಿಟ್ಟು

Krishnaveni K
ಶುಕ್ರವಾರ, 4 ಏಪ್ರಿಲ್ 2025 (10:22 IST)
Photo Credit: X
ನವದೆಹಲಿ: ರಾಜ್ಯದಲ್ಲಿ ಹನಿಟ್ರ್ಯಾಪ್ ವಿಚಾರವನ್ನು ಬೀದಿರಂಪ ಮಾಡಿರುವುದಕ್ಕೆ ನಿನ್ನೆ ತಮ್ಮನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ ಜೊತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಸಮಾಧಾನ ತೋಡಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಸದನದಲ್ಲಿ ಆಡಳಿತ ಪಕ್ಷದ ನಾಯಕರೇ ಹನಿಟ್ರ್ಯಾಪ್ ವಿಚಾರವನ್ನು ಬಟಾಬಯಲು ಮಾಡಿದ್ದರು. ಸಚಿವ ಕೆಎನ್ ರಾಜಣ್ಣ ತಮ್ಮ ಮೇಲೆ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದಿದ್ದರು. ಈ ವಿಚಾರ ಭಾರೀ ಸದ್ದು ಮಾಡಿತ್ತು. ಸ್ವತಃ ಕಾಂಗ್ರೆಸ್ ನಾಯಕರ ಮೇಲೆಯೇ ಅನುಮಾನ ಮೂಡುವಂತಾಗಿತ್ತು.

ಇದರ ಬೆನ್ನಲ್ಲೇ ಹೈಕಮಾಂಡ್ ನಿಂದ ಸದನದಲ್ಲಿ ಈ ವಿಚಾರ ಪ್ರಸ್ತಾಪಿಸದಂತೆ ಎಚ್ಚರಿಕೆ ಸಂದೇಶ ರವಾನೆಯಾಗಿತ್ತು ಎನ್ನಲಾಗಿದೆ. ಇದೀಗ ನಿನ್ನೆ ರಾಹುಲ್ ಗಾಂಧಿ ಭೇಟಿಗೆ ಸಿಎಂ ಸಿದ್ದರಾಮಯ್ಯ ಹೋಗಿದ್ದ ವೇಳೆಯೂ ಇದೇ ವಿಚಾರ ಪ್ರಸ್ತಾಪವಾಗಿದೆ.

ರಾಹುಲ್ ಜೊತೆ ಸಿದ್ದರಾಮಯ್ಯ ಅರ್ಧಗಂಟೆ ಮಾತುಕತೆ ನಡೆಸಿದ್ದಾರೆ. ಈ ವೇಳೆ ಹನಿಟ್ರ್ಯಾಪ್ ವಿಚಾರ ಏನೇ ಇದ್ದರೂ ಹೈಕಮಾಂಡ್ ಜೊತೆ ಚರ್ಚೆ ಮಾಡಬಹುದಿತ್ತು. ಅದು ಬಿಟ್ಟು ಸದನದಲ್ಲಿ ಪ್ರಸ್ತಾಪಿಸಿದ್ದು ಯಾಕೆ ಎಂದು ರಾಹುಲ್ ಪ್ರಶ್ನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments