Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಭೇಟಿಯಾಗದಿದ್ದರೂ ಅದೊಂದು ಸಂದೇಶ ಕಳುಹಿಸಿದ್ದ ರಾಹುಲ್ ಗಾಂಧಿ

Krishnaveni K
ಶುಕ್ರವಾರ, 11 ಜುಲೈ 2025 (09:35 IST)
ನವದೆಹಲಿ: ಕರ್ನಾಟಕ ರಾಜ್ಯ ರಾಜಕೀಯದ ಬಗ್ಗೆ ಚರ್ಚಿಸಲು ದೆಹಲಿಗೆ ತೆರಳಿದ್ದ ಸಿಎಂ
Photo Credit: X
ಸಿದ್ದರಾಮಯ್ಯರನ್ನು ರಾಹುಲ್ ಗಾಂಧಿಯವರನ್ನು ಭೇಟಿ ಮಾಡಲು ತೆರಳಿದ್ದರು. ಆದರೆ ರಾಹುಲ್ ಗಾಂಧಿ ಭೇಟಿಯಾಗಲಿಲ್ಲ. ಆದರೆ ಸಿದ್ದರಾಮಯ್ಯಗೆ ಸಂದೇಶವೊಂದನ್ನು ನೀಡಿದ್ದರು ಎನ್ನಲಾಗಿದೆ.

ನಿನ್ನೆ ದೆಹಲಿಯಲ್ಲಿ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲೇ ಐದು ವರ್ಷವೂ ನಾನೇ ಸಿಎಂ ಎಂದಿದ್ದು ಭಾರೀ ಸಂಚಲನ ಮೂಡಿಸಿತ್ತು. ಡಿಕೆ ಶಿವಕುಮಾರ್ ಸಿಎಂ ಆಗುವ ಕನಸಿಗೆ ಇದು ತಣ್ಣೀರೆರಚಿತ್ತು. ಸಿದ್ದರಾಮಯ್ಯ ಹೇಳಿಕೆ ಡಿಕೆಶಿ ಬೆಂಬಲಿಗರ ಆಕ್ರೋಶಕ್ಕೂ ಕಾರಣವಾಗಿದೆ.

ಆದರೆ ಸಿದ್ದರಾಮಯ್ಯ ಈ ಹೇಳಿಕೆಗೆ ರಾಹುಲ್ ಗಾಂಧಿ ಸಂದೇಶವೇ ಕಾರಣ ಎನ್ನಲಾಗಿದೆ. ದೆಹಲಿಗೆ ತೆರಳಿದ್ದ ಸಿದ್ದರಾಮಯ್ಯಗೆ ನಾಯಕತ್ವ ಬದಲಾವಣೆ ಇಲ್ಲ. ಸದ್ಯಕ್ಕೆ ಯಾವುದೇ ಬದಲಾವಣೆ ಮಾಡಿ ಗೊಂದಲ ಮೂಡಿಸುವುದು ಬೇಡ ಎಂದು ರಾಹುಲ್ ಗಾಂಧಿಯವರೇ ಸ್ಪಷ್ಟ ಸಂದೇಶ ನೀಡಿದ್ದರು ಎನ್ನಲಾಗಿದೆ.

ಈ ಕಾರಣಕ್ಕೆ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಿ ತಮ್ಮ ವಿರೋಧಿಗಳಿಗೆ ಐದು ವರ್ಷ ನೀವೇ ಸಿಎಂ ಎಂದು ಖಡಕ್ ಸಂದೇಶ ನೀಡಿದ್ದಾರೆ ಎನ್ನಲಾಗಿದೆ. ಸದ್ಯದ ಮಟ್ಟಿಗೆ ಸಂಪುಟ ಪುನರಾಚನೆಯೂ ಬೇಡ ಎಂದು ಹೈಕಮಾಂಡ್ ಸಂದೇಶ ನೀಡಿದೆ. ಹೀಗಾಗಿ ಸಿದ್ದರಾಮಯ್ಯ ಇಷ್ಟು ಆತ್ಮವಿಶ್ವಾಸದಿಂದ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments