ಬೆಂಗಳೂರಿಗೆ ರಾಹುಲ್ ಗಾಂಧಿ ಎಂಟ್ರಿ..!!!

Webdunia
ಗುರುವಾರ, 31 ಮಾರ್ಚ್ 2022 (16:14 IST)
ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಗುರುವಾರ ಮಧ್ಯಾಹ್ನ ಬೆಂಗಳೂರಿಗೆ ಆಗಮಿಸಿದರು. ಮೊದಲಿಗೆ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡುವ ರಾಹುಲ್​ ಗಾಂಧಿ, ಡಾ.ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆಯ ದರ್ಶನ ಪಡೆಯಲಿದ್ದಾರೆ.
ಬೆಂಗಳೂರಿನ ವಿಮಾಣ ನಿಲ್ದಾಣಕ್ಕೆ ಬಂದಿಳಿದ ರಾಹುಲ್​ ಗಾಂಧಿ ಅವರನ್ನ ಡಿ.ಕೆ.ಶಿಕುಮಾರ್​ ಮತ್ತು ಸಿದ್ದರಾಮಯ್ಯ ಸ್ವಾಗತಿಸಿದರು. ತುಮಕೂರಿಗೆ ಪ್ರಯಾಣ ಬೆಳಸಿದ ಬಳಿಕ ಬೆಂಗಳೂರಿಗೆ ಹಿಂದಿರುಗಿ ಬಿಬಿಎಂಪಿ ಚುನಾವಣೆ ಸಂಬಂಧ ಪ್ರಮುಖ ನಾಯಕರು, ಬೆಂಗಳೂರು ಭಾಗದ ಶಾಸಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಏ.1ರ ಬೆಳಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕಾರಿ ಸಮಿತಿ ಸಭೆ, ಅಂದು ಮಧ್ಯಾಹ್ನ 2ರಿಂದ 3.20ರವರೆಗೆ ಮುಂಚೂಣಿ ಘಟಕದೊಂದಿಗೆ ಸಮಾಲೋಚನೆ, ಪ್ರತ್ಯೇಕವಾಗಿ ವಿವಿಧ ಘಟಕಗಳ ಜವಾಬ್ದಾರಿ ವಿವರಣೆ ಪಡೆಯಲಿದ್ದಾರೆ. ಇದಿಷ್ಟು ಪೂರ್ವ ನಿಗದಿತ ಕಾರ್ಯಕ್ರಮ.
 
ಇದನ್ನು ಹೊರತುಪಡಿಸಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಮತ್ತು ಕಾರ್ಯಾಧ್ಯಕ್ಷರ ಜತೆ ಪ್ರತ್ಯೇಕ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಏ.1ರ ಮಧ್ಯಾಹ್ನ 3.30ಕ್ಕೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments