Webdunia - Bharat's app for daily news and videos

Install App

ರೇಪಿಸ್ಟ್‌ ಪ್ರಜ್ವಲ್‌ ರೇವಣ್ಣ ಪರ ಮತಯಾಚಿಸಿದ ಮೋದಿ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ ಒತ್ತಾಯ

Sampriya
ಗುರುವಾರ, 2 ಮೇ 2024 (18:01 IST)
Photo Courtesy X
ಶಿವಮೊಗ್ಗ: ಪ್ರಜ್ವಲ್ ರೇವಣ್ಣ ಅವರಂತಹ ಸಾಮೂಹಿಕ ಅತ್ಯಾಚಾರಿಯನ್ನು ಬೆಂಬಲಿಸಿ ಮತ ಯಾಚಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನರಲ್ಲಿ ಮತ್ತು ವಿಶೇಷವಾಗಿ ಮಹಿಳೆಯರಲ್ಲಿ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಗೀತಾ ಶಿವರಾಜ್‌ ಕುಮಾರ್ ಪರ ಮತಯಾಚನೆ ಮಾಡಿದ ಅವರು ಸಾರ್ವಜನಿಕ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದದರು.

"ಹಾಸನ‌ ಸಂಸದ, ಹಾಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು 400 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿದ್ದಾನೆ. ಇದು ಬರೀ‌ ಲೈಂಗಿಕ ಹಗರಣ ಅಲ್ಲ. 'ಸಾಮೂಹಿಕ‌ ಅತ್ಯಾಚಾರ'," ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆಕ್ರೋಶ ಹೊರಹಾಕಿದರು.

ಕರ್ನಾಟಕದಲ್ಲಿ ಇಂತಹ ಅತ್ಯಾಚಾರಿಗೆ ಮತದಾನ ಮಾಡಿದರೆ‌ ನನಗೆ ಮತ ನೀಡಿದಂತೆ ಎಂದು ಪ್ರಧಾನಿ ನರೇಂದ್ರ ಮೋದಿ‌ ಪ್ರಚಾರ ಮಾಡಿದ್ದಾರೆ. ಮುಂಚೆಯೇ ಲೈಂಗಿಕ ಹಗರಣದ ಬಗ್ಗೆ ಮಾಹಿತಿ‌‌ ಇದ್ದರೂ‌ ಮೋದಿ ಪ್ರಜ್ವಲ್‌ ಪ್ರಚಾರ ಮಾಡಿ‌ ಘಟನೆಯನ್ನು ಸಮರ್ಥಿಸಿಕೊಂಡಿದ್ದಾರೆ. ಸಾಮೂಹಿ‌ಕ ಅತ್ಯಾಚಾರಿಯ ಪರ ವಹಿಸಿಕೊಂಡಿದ್ದರಿಂದ ದೇಶದ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ನರೇಂದ್ರ‌‌ ಮೋದಿ, ಅಮಿತ್ ಶಾ ಸೇರಿದಂತೆ ಬಿಜೆಪಿಯ ಪ್ರಮುಖರು ಕೃತ್ಯಕ್ಕಾಗಿ ದೇಶದ ಮಹಿಳೆಯರ ಕ್ಷಮೆ ಕೇಳಬೇಕು ಎಂದು ರಾಹುಲ್‌ ಆಗ್ರಹಿಸಿದರು.

ಪ್ರಜ್ವಲ್ ರೇವಣ್ಣರಂತಹ ಪೆನ್‌ಡ್ರೈವ್ ಪ್ರಕರಣ ಘಟನೆ ಹಿಂದೆಂದೂ ನಡೆದಿಲ್ಲ. ಪ್ರಧಾನಿ ಅವರು ಸಾಮೂಹಿಕ ಅತ್ಯಾಚಾರಿಯನ್ನು ಬೆಂಬಲಿಸಿದ್ದಾರೆ. ಇದೇ ಬಿಜೆಪಿಯ ಮಾನಸಿಕತೆಯಾಗಿದೆ. ಅಧಿಕಾರ ಪಡೆಯಲು ಅವರು‌ ಏನು ಬೇಕಾದರೂ ಮಾಡಲು ಸಿದ್ಧರಾಗಿದ್ದಾರೆ ಎನ್ನುವುದಕ್ಕೆ ಇದೇ ಸಾಕ್ಷಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ