Webdunia - Bharat's app for daily news and videos

Install App

ಮಾರ್ಚ್​ 24, 25 ರಂದು ಮಂಡ್ಯದಲ್ಲಿ ರಾಹುಲ್ ಗಾಂಧಿ ಪ್ರವಾಸ

Webdunia
ಶುಕ್ರವಾರ, 23 ಮಾರ್ಚ್ 2018 (17:53 IST)
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮಾರ್ಚ್ 24, 25 ರಂದು ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಮಾ.24ರಂದು ಸಂಜೆ  ಮಳವಳ್ಳಿ ಯಲ್ಲಿ ಆಯೋಜಿಸಿರುವ ಜನಾಶೀರ್ವಾದ ಯಾತ್ರೆ ಹಾಗೂ ರೋಡ್ ಷೋನಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳಿದ್ದಾರೆ. 
ಮಾ. 25ರಂದು ಕೆ.ಆರ್.ಪೇಟೆ, ಶ್ರೀರಂಗಪಟ್ಟಣ ದಲ್ಲಿ ಕಾರ್ನರ್ ಮೀಟಿಂಗ್, ರೋಡ್ ಷೋ ನಡೆಯಲಿದೆ. ಹೀಗಾಗಿ ರಾಹುಲ್ ಗಾಂಧಿ ಬರುವ ಸಂದರ್ಭದಲ್ಲಿ ಮುಜುಗರಕ್ಕೀಡಾಗುವಂತೆ ನಡೆದುಕೊಳ್ಳಬಾರದು ಎಂದು
 
ಶ್ರೀರಂಗಪಟ್ಟಣ ಕಾಂಗ್ರೆಸ್ ಮುಖಂಡರಿಗೆ ಜಿಲ್ಲಾ ಕಾಂಗ್ರೆಸ್   ಖಡಕ್ ಎಚ್ಚರಿಕೆ ನೀಡಿದೆ. ಬಂಡಾಯ ಶಾಸಕ ರಮೇಶ್ ಬಂಡಿಸಿದ್ದೇಗೌಡ ಗೆ ಟಿಕೆಟ್ ಕೊಡಲು ವಿರೋಧ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಭೇಟಿ ವೇಳೆ ಯಾವುದೇ ರೀತಿಯ ಗೊಂದಲ ಆಗಬಾರದು ಎಂಬ ನಿಟ್ಟಿನಲ್ಲಿ ಖಡಕ್ ಸೂಚನೆ ನೀಡಲಾಗಿದೆ ಎನ್ನಲಾಗಿದೆ. 
 
ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಮುಂದೆ ಶಿಸ್ತಿನಿಂದ ವರ್ತಿಸುವಂತೆಯೂ ಸೂಚನೆ ನೀಡಲಾಗಿದೆ. ಶ್ರೀರಂಗಪಟ್ಟಣ ದಲ್ಲಿ ರಾಹುಲ್ ಗಾಂಧಿ ಚರ್ಚ್ ಅಥವಾ ಟಿಪ್ಪು ಸಮಾಧಿಗೆ ಭೇಟಿ ಕೊಡುವ ಸಾಧ್ಯತೆ ಇದೆ. ಆದರೂ ಈ ಬಗ್ಗೆ ಅಧಿಕೃತ ತೀರ್ಮಾನ ಆಗಿಲ್ಲ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments