Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ!

Webdunia
ಭಾನುವಾರ, 8 ಏಪ್ರಿಲ್ 2018 (07:19 IST)
ಕೋಲಾರ : ಬಿಜೆಪಿಯಲ್ಲಿ ಎಲ್ಲವನ್ನೂ ಮೋದಿ ಹಾಗೂ ಅಮಿತ್ ಶಾ ನಿರ್ಣಯಿಸುತ್ತಾರೆ. ಇದನ್ನ ಕೇಳಲು ಬಿಜೆಪಿಯಲ್ಲಿ ಯಾರಿಗೂ ಧೈರ್ಯವಿಲ್ಲ ಎಂದು ರಾಹುಲ್ ಗಾಂಧಿ ಬಿಜೆಪಿ ಅವರನ್ನು ವ್ಯಂಗ್ಯ ಮಾಡಿದ್ದಾರೆ.


ಕಾಂಗ್ರೆಸ್‌ನ ಜನಾಶೀರ್ವಾದ ಯಾತ್ರೆ ಭಾಗವಾಗಿ ಕರ್ನಾಟಕ ಪ್ರವಾಸದಲ್ಲಿರುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕೋಲಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,’ ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ಮಧ್ಯೆ ಒಪ್ಪಂದವಾಗಿದೆ. ಈ ದೇಶದಲ್ಲಿ ಅವರಿಬ್ಬರೇ ಮನುಷ್ಯರು ಅಂತಾ ಅಂದುಕೊಂಡಿದ್ದಾರೆ. ಎಲ್ಲವನ್ನೂ ಈ ಇಬ್ಬರೇ ನಿರ್ಣಯಿಸುತ್ತಾರೆ. ಇದನ್ನ ಕೇಳಲು ಬಿಜೆಪಿಯಲ್ಲಿ ಯಾರಿಗೂ ಧೈರ್ಯವಿಲ್ಲ ಎಂದು ಹೇಳಿದ್ದಾರೆ.


ಅಲ್ಲದೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು,’ ನರೇಂದ್ರ ಮೋದಿ ಸರ್ಕಾರ ಸಂವಿಧಾನ ಬದಲಾವಣೆ ಮಾಡಲು ಹೋದರೆ ದೇಶದಾದ್ಯಂತ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಿದೆ. ಅಂಬೇಡ್ಕರ್ ಮತ್ತು ದಲಿತರಿಗೆ ಅವಮಾನ ಮಾಡಿ, ನಂತರ ಅಂಬೇಡ್ಕರ್ ಪುತ್ಥಳಿ ಮುಂದೆ ಕೈ ಮುಗಿತಾರೆ. ಮೋದಿ ಸುತ್ತಲು ಭ್ರಷ್ಟಾಚಾರಿಗಳನ್ನ ಇಟ್ಟುಕೊಂಡು ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಮೋದಿ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಮುನ್ನ ಭ್ರಷ್ಟರನ್ನ ವೇದಿಕೆಯಿಂದ ಕೆಳಗಿಳಿಸಿ ಮಾತನಾಡಲಿ. ಮೋದಿ ಬ್ಯಾಂಕ್ ಲೂಟಿಕೋರರ ಪರವಾಗಿ ಇದ್ದಾರೆ. ನೀರವ್ ಮೋದಿ, ಲಲಿತ್ ಮೋದಿ, ವಿಜಯ್ ಮಲ್ಯಗೆ ಮೋದಿ ಬೆಂಬಲವಿದೆ. ಲೂಟಿಕೋರಿಗೆ ಎಷ್ಟು ಬೇಕಾದರೂ ಸಾಲ ಕೊಡುತ್ತಾರೆ. ಇನ್ನೊಂದೆಡೆ ರೈತರ ಸಾಲ ಮನ್ನಾ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಟೀಕಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ಅಸ್ತ್ರವಾದ '80s AI ಫೋಟೋ ಟ್ರೆಂಡ್': ಕಾಂಗ್ರೇಸ್ ಬಿಜೆಪಿ ನಡುವೆ ಪೋಸ್ಟರ್ ವಾರ್

ರಸ್ತೆಯಲ್ಲಿ ಕಾದಾಟುತ್ತಿದ್ದ ಹೋರಿಗಳು ಅಂಗಡಿಯೊಳಗೆ ನುಗ್ಗಿದ್ದರಿಂದ ಲಕ್ಷಾಂತರ ಮೌಲ್ಯದ ವಸ್ತುಗಳು ಜಖಂ, Video

ತರಗತಿಯಲ್ಲಿ ಕೂರುವ ಸ್ಥಳದ ವಿಚಾರವಾಗಿ ಕ್ಲಾಸ್‌ಮೇಟ್‌ಗಳ ನಡುವೆ ಹೇಗೆ ಜಗಳ ನಡೆಯಿತು ನೋಡಿ

ಡಿಕೆಶಿ ಆಡಳಿತಕ್ಕೆ ಶತಕದ ಸಂಭ್ರಮ: ರಾಜ್ಯದ ಅವೃದ್ಧಿಗೆ ಮೂರು ಮಹಾ ಸಂಕಲ್ಪ ಘೋಷಿಸಿದ ಸಿಎಂ ಶಿವಕುಮಾರ್‌

ಗಲ್ವಾನ್ ಸಂಘರ್ಷದ ಬಳಿಕ ಮೊದಲ ಬಾರಿ ಭಾರತಕ್ಕೆ ಚೀನಾ ಅಧ್ಯಕ್ಷ: ಗರಿಗೆದರಿದ ದ್ವಿಪಕ್ಷೀಯ ಮಾತುಕತೆ

ಮುಂದಿನ ಸುದ್ದಿ
Show comments