Webdunia - Bharat's app for daily news and videos

Install App

ಕೃಷಿ, ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ದೇಶದಲ್ಲೇ ರಾಯಚೂರಿಗೆ ಫಸ್ಟ್ ರ್ಯಾಂಕ್

Webdunia
ಶನಿವಾರ, 27 ಮೇ 2023 (10:03 IST)
ರಾಯಚೂರು : ಕೃಷಿ ಮತ್ತು ಜಲ ಸಂಪನ್ಮೂಲ ಅಭಿವೃದ್ಧಿಯಲ್ಲಿ ರಾಯಚೂರು ಜಿಲ್ಲೆ ದೇಶದಲ್ಲೇ ಮೊದಲನೇ ರ್ಯಾಂಕ್ ಪಡೆದಿದೆ. ಮಹಾತ್ಮಾಕಾಂಕ್ಷೆ ಜಿಲ್ಲೆಗಳ ಕಾರ್ಯಕ್ರಮದಡಿ ಕೇಂದ್ರ ಸರ್ಕಾರದ ನೀತಿ ಆಯೋಗದಿಂದ ಜಿಲ್ಲೆ ಫಸ್ಟ್ ರ್ಯಾಂಕ್ ಪಡೆದುಕೊಂಡಿದೆ.

2023ರ ಮಾರ್ಚ್ನಲ್ಲಿ ಜಿಲ್ಲಾಡಳಿತದ ಕಾರ್ಯವೈಖರಿ ಆಧಾರದ ಮೇಲೆ ಜಿಲ್ಲೆಗೆ ಈ ರ್ಯಾಂಕ್ ನೀಡಲಾಗಿದೆ. ರಾಜ್ಯದಲ್ಲಿ ರಾಯಚೂರು ಹಾಗೂ ಯಾದಗಿರಿ ಮಹತ್ವಾಕಾಂಕ್ಷೆ ಜಿಲ್ಲೆಗಳಾಗಿದ್ದು, ದೇಶದ ಒಟ್ಟು 115 ಮಹತ್ವಾಕಾಂಕ್ಷೆ ಜಿಲ್ಲೆಗಳಲ್ಲಿ ರಾಯಚೂರಿಗೆ ಮೊದಲ ಸ್ಥಾನ ದೊರೆತಿದೆ. ಕಾರ್ಯಕ್ಷಮತೆ ಮೇರೆಗೆ, ಮೊದಲ ಸ್ಥಾನ ಪಡೆದ ಹಿನ್ನೆಲೆ ಹೆಚ್ಚುವರಿ 3 ಕೋಟಿ ರೂ. ಅನುದಾನ ಪಡೆಯಲು ಜಿಲ್ಲೆ ಅರ್ಹತೆ ಪಡೆದಿದೆ.

ಕೃಷಿ ಕ್ಷೇತ್ರ ವಿಸ್ತರಣೆ, ಜಲ ಸಂರಕ್ಷಣೆ ವಿಧಾನಗಳು ಹಾಗೂ ನೀತಿ ಆಯೋಗದ ಮಾನದಂಡಗಳ ಅಡಿ ಮಂಡಿಸಿರುವ ಜಿಲ್ಲೆಯ ಸ್ಥಿತಿಗತಿಗಳ ವರದಿ ಆಧಾರದ ಮೇಲೆ ಜಿಲ್ಲೆಗೆ ಈ ಸ್ಥಾನ ದೊರಕಿದೆ. ಈ ವಿಚಾರವಾಗಿ ಕೇಂದ್ರ ನೀತಿ ಆಯೋಗದ ಹೆಚ್ಚುವರಿ ಕಾರ್ಯದರ್ಶಿ ವಿ.ರಾಧಾ ಅವರು ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ವಂದಿತಾ ಶರ್ಮಾರಿಗೆ ಪತ್ರ ಬರೆದು ಅಭಿನಂದಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments