Webdunia - Bharat's app for daily news and videos

Install App

ಡಿ.ಕೆ. ಶಿವಕುಮಾರ್ ಮನೆ ಮೇಲಿನ ದಾಳಿ ರಾಜಕೀಯಪ್ರೇರಿತ: ಸಿಎಂ ಸಿದ್ದರಾಮಯ್ಯ

Webdunia
ಶುಕ್ರವಾರ, 4 ಆಗಸ್ಟ್ 2017 (15:14 IST)
ಸಚಿವ ಡಿ.ಕೆ. ಶಿವಕುಮಾರ್ ಮನೆ ಮೇಲಿನ ಐಟಿ ದಾಳಿ ರಾಜಕೀಯಪ್ರೇರಿತ. ದಾಳಿಯ ಸಮಯವೂ ಸಹ ಇದೊಂದು ರಾಜಕೀಯಪ್ರೇರಿತ ದಾಳಿ ಎಂಬುದನ್ನ ತೋರಿಸುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಯಾವುದೇ ಮನೆ ಮೇಲೆ ಐಟಿ ದಾಳಿ ಬಗ್ಗೆ ನನ್ನ ವಿರೋಧವಿಲ್ಲ. ಆದರೆ, ದಾಳಿ ಮಾಡಿದ ಸಮಯ ಮತ್ತು ಉದ್ದೇಶ ಸರಿಯಾದುದಲ್ಲ.  ಗುಜರಾತ್ ಶಾಸಕರು ಇಲ್ಲಿಗೆ ಬಂದಿರುವ ಸಂದರ್ಭದಲ್ಲೇ ದಾಳಿ ನಡೆದಿದೆ.

ಐಟಿ ದಾಳಿ ವೇಳೆ ಸ್ತಳೀಯ ಪೊಲೀಸರ ನೆರವು ಪಡೆಯುತ್ತರೆ. ಈ ಬಾರಿ ಐಟಿ ಅಧಿಕಾರಿಗಳು ಸಿಆರ್`ಪಿಎಫ್ ಕರೆತಂದಿದ್ದಾರೆ. ಇದು ಅವರ ಉದ್ದೇಶ ತೋರಿಸುತ್ತದೆ ಎಂದಿದ್ದಾರೆ. ದಾಳಿಯಲ್ಲಿ ಏನು ಸಿಕ್ಕಿದೆ, ಏನು ಸಿಕ್ಕಿಲ್ಲ ಎಂಬುದು ನಮ್ಮ ಯಾರಿಗೂ ಗೊತ್ತಿಲ್ಲ. ದಾಳಿಗೆ ಸಿಆರ್`ಪಿಎಫ್ ಬಳಸಿದ್ದೇಕೆ ಎಂದು ಸಿಎಂ ಪ್ರಶ್ನಿಸಿದ್ದಾರೆ.

ಇದೇವೇಳೆ, ಡಿ.ಕೆ. ಶಿವಕುಮಾರ್ ರಾಜೀನಾಮೆಗೆ ಕೇಂದ್ರ ಸಚಿವ ಅನಂತ್ ಕುಮಾರ್ ಒತ್ತಾಯಿಸಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಅನಂತ್ ಕುಮಾರ್ ಮೇಲೂ ಭ್ರಷ್ಟಾಚಾರ ಆರೋಪವಿದೆ. ತನಿಖೆ ಈಗಲೂ ನಡೆಯುತ್ತಿದೆ. ಕರ್ನಾಟಕದ ಹಲವು ಬಿಜೆಪಿ ನಾಯಕರ ಮೇಲೆ ಭ್ರಷ್ಟಾಚಾರದ ಆರೋಪವಿದೆ. ಯಡಿಯೂರಪ್ಪನ ವಿರುದ್ಧ ಭ್ರಷ್ಟಾಚಾರ ಆರೋಪವಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಎಕ್ಸ್ ಪ್ರೆಸ್ ರೈಲಿನಲ್ಲೇ ಮದ್ಯ ಕಳ್ಳಸಾಗಣಿಕೆ: ವಿಡಿಯೋ ವೈರಲ್

Karnataka Weather: ಇಂದಿನಿಂದ ಹವಾಮಾನದ ಈ ಬದಲಾವಣೆಯನ್ನು ತಪ್ಪದೇ ಗಮನಿಸಿ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಮುಂದಿನ ಸುದ್ದಿ
Show comments