Select Your Language

Notifications

webdunia
webdunia
webdunia
webdunia

ಯೋಧರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ರೈಲ್ವೆ ಇಲಾಖೆಯ ಸಿಬ್ಬಂದಿ ಅರೆಸ್ಟ್

ಯೋಧರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ರೈಲ್ವೆ ಇಲಾಖೆಯ ಸಿಬ್ಬಂದಿ ಅರೆಸ್ಟ್
ಮುಂಬೈ , ಭಾನುವಾರ, 17 ಫೆಬ್ರವರಿ 2019 (09:29 IST)
ಮುಂಬೈ : ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ಸಿ.ಆರ್‌.ಪಿ.ಎಫ್ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ನಡೆದಿದ್ದ ಸಭೆಯಲ್ಲಿ ರೈಲ್ವೆ ಇಲಾಖೆಯ ಟಿಕೆಟ್ ಕಲೆಕ್ಟರ್ (ಟಿಸಿ)ಯೊಬ್ಬ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ.


ಈತ ಲೋನಾವಾಲ ರೈಲು ನಿಲ್ದಾಣದ ಉಪೇಂದ್ರಕುಮಾರ್ ಶ್ರೀವೀರ್ ಬಹಾದೂರ್ ಸಿಂಗ್ (39) ಎಂಬುದಾಗಿ ತಿಳಿದುಬಂದಿದೆ. ಲೋನಾವಾಲದ ಶಿವಾಜಿ ಚೌಕ್‍ನಲ್ಲಿ ಸ್ಥಳೀಯರು ಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಉಪೇಂದ್ರಕುಮಾರ್ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.


ಈ ವೇಳೆ ಸ್ಥಳದಲ್ಲಿದ್ದ ಪುಣೆ ಗ್ರಾಮಾಂತರ ಠಾಣೆಯ ಪೊಲೀಸರು ಉಪೇಂದ್ರಕುಮಾರ್ ನನ್ನು ಬಂಧಿಸಿ ಐಪಿಸಿ ಸೆಕ್ಷನ್ 153 (ಬಿ) ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತರುವ ಹೇಳಿಕೆ ಆರೋಪದ ಅಡಿ ಪ್ರಕರಣ ದಾಖಲಿಸಿದ್ದಾರೆ. ಹಾಗೇ ಉಪೇಂದ್ರ ಕುಮಾರ್ ನನ್ನು ಕೆಲಸದಿಂದ ಅಮಾನತು ಮಾಡುವಂತೆ ಆದೇಶಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಕೆಟ್ಟು ನಿಂತಿದ್ದಕ್ಕೆ ಕೇಂದ್ರ ಸರ್ಕಾರದ ಕಾಲೆಳೆದ ರಮ್ಯಾ