Webdunia - Bharat's app for daily news and videos

Install App

ಯೋಧರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ರೈಲ್ವೆ ಇಲಾಖೆಯ ಸಿಬ್ಬಂದಿ ಅರೆಸ್ಟ್

Webdunia
ಭಾನುವಾರ, 17 ಫೆಬ್ರವರಿ 2019 (09:29 IST)
ಮುಂಬೈ : ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ಸಿ.ಆರ್‌.ಪಿ.ಎಫ್ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ನಡೆದಿದ್ದ ಸಭೆಯಲ್ಲಿ ರೈಲ್ವೆ ಇಲಾಖೆಯ ಟಿಕೆಟ್ ಕಲೆಕ್ಟರ್ (ಟಿಸಿ)ಯೊಬ್ಬ ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾನೆ.


ಈತ ಲೋನಾವಾಲ ರೈಲು ನಿಲ್ದಾಣದ ಉಪೇಂದ್ರಕುಮಾರ್ ಶ್ರೀವೀರ್ ಬಹಾದೂರ್ ಸಿಂಗ್ (39) ಎಂಬುದಾಗಿ ತಿಳಿದುಬಂದಿದೆ. ಲೋನಾವಾಲದ ಶಿವಾಜಿ ಚೌಕ್‍ನಲ್ಲಿ ಸ್ಥಳೀಯರು ಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಉಪೇಂದ್ರಕುಮಾರ್ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.


ಈ ವೇಳೆ ಸ್ಥಳದಲ್ಲಿದ್ದ ಪುಣೆ ಗ್ರಾಮಾಂತರ ಠಾಣೆಯ ಪೊಲೀಸರು ಉಪೇಂದ್ರಕುಮಾರ್ ನನ್ನು ಬಂಧಿಸಿ ಐಪಿಸಿ ಸೆಕ್ಷನ್ 153 (ಬಿ) ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತರುವ ಹೇಳಿಕೆ ಆರೋಪದ ಅಡಿ ಪ್ರಕರಣ ದಾಖಲಿಸಿದ್ದಾರೆ. ಹಾಗೇ ಉಪೇಂದ್ರ ಕುಮಾರ್ ನನ್ನು ಕೆಲಸದಿಂದ ಅಮಾನತು ಮಾಡುವಂತೆ ಆದೇಶಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments