Publish Date: Wed, 28 Nov 2018 (19:21 IST)
Updated Date: Wed, 28 Nov 2018 (19:24 IST)
ಕಲಬುರಗಿ ಲೋಕಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಕಲಬುರಗಿ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ರೈಲ್ವೆ ಮಂತ್ರಾಲಯದ ಅಧಿಕಾರಿಗಳು ಹಾಗೂ ವಿವಿಧ ವಲಯದ ಜನರಲ್ ಮ್ಯಾನೇಜರ್ಗಳೊಂದಿಗೆ ಭಾರತೀಯ ರೈಲ್ವೆಯಲ್ಲಿ ಕ್ಯಾಟರಿಂಗ್ ಸೇವೆ ಕುರಿತು ಚರ್ಚೆ ನಡೆಸಿತು.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಬಿಹಾರ ಸಂಸದ ಜನಾರ್ಧನ ಸಿಂಗ್ ಸಿಗ್ರಿವಾಲ್, ರಾಜ್ಯಸಬಾ ಸಂಸದರಾದ ರಾಜೀವಗೌಡ, ಸಾರ್ವಜನಿಕ ಲೆಕ್ಕಪತ್ರ ಸಮಿತಿ ನಿರ್ದೇಶಕ ಜಯಕುಮಾರ ಟಿ., ಹೆಚ್ಚುವರಿ ನಿರ್ದೇಶಕ ಎ.ಕೆ. ಸಿಂಗ್, ಕಾರ್ಯದರ್ಶಿ ಆರ್. ನಾರಾಯಣನ್, ಪ್ರಾದೇಶಿಕ ಆಯುಕ್ತ ಸುಬೋಧ ಯಾದವ, ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ದಕ್ಷಿಣ ಪಶ್ಚಿಮ ರೈಲ್ವೆ ವಲಯದ ಜನರಲ್ ಮ್ಯಾನೇಜರ್ ಎ.ಕೆ.ಸಿಂಗ್ ಸೇರಿದಂತೆ ವಿವಿಧ ವಲಯದ ಜನರಲ್ ಮ್ಯಾನೇಜರ್ಗಳು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.