Webdunia - Bharat's app for daily news and videos

Install App

ಜುಲೈ 15ರವರೆಗೆ ಗುಡುಗು ಸಹಿತ ಭಾರೀ ಮಳೆ

Webdunia
ಭಾನುವಾರ, 11 ಜುಲೈ 2021 (19:06 IST)
ಬೆಂಗಳೂರು: ಬಂಗಾಳ ಉಪಸಾಗರದ ಪಶ್ಚಿಮ ಭಾಗದ ಮಧ್ಯಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಈ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಜುಲೈ 15ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. 
 
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳ ಕೆಲವೆಡೆ ಭಾರಿ ಹಾಗೂ ಅತಿಭಾರಿ ಮಳೆಯಾಗುವ ನಿರೀಕ್ಷೆಯಿದೆ. ಜುಲೈ 12ರಿಂದ 15ರವರೆಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭಾರಿ ಮಳೆಯನ್ನು ನಿರೀಕ್ಷಿಸಲಾಗಿದ್ದು, ಜುಲೈ 15ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಪ್ರಾಾದೇಶಿಕ ನಿರ್ದೆಶಕ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ.
 
ಕರಾವಳಿ ಜಿಲ್ಲೆಗಳಲ್ಲಿ ಭಾನುವಾರ ವ್ಯಾಪಕ ಮಳೆಯಾಗಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ.
 
ಮುಖ್ಯವಾಗಿ, ಉತ್ತರ ಕನ್ನಡ ಜಿಲ್ಲೆಯ ಮಂಕಿಯಲ್ಲಿ 12 ಸೆಂ.ಮೀ, ಉಡುಪಿ ಜಿಲ್ಲೆಯ ಕೋಟ, ಕುಂದಾಪುರದಲ್ಲಿ 10 ಸೆಂ.ಮೀ, ಮಂಗಳೂರಿನಲ್ಲಿ 9 ಸೆಂ.ಮೀ, ಕೊಡಗು ಜಿಲ್ಲೆಯ ಭಾಗಮಂಡಲ 7 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಗೊಂದಲಕ್ಕೆ ಇಂದೇ ತೆರೆ: ವಿಜಯೇಂದ್ರ ವಿಶ್ವಾಸ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಹೃದಯಾಘಾತ ತಡೆಯಲು ಮೂರು ಪರೀಕ್ಷೆಗಳು ಕಡ್ಡಾಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಕೇಸ್ ಬಗ್ಗೆ ಇಂದು ಸಚಿವ ಪರಮೇಶ್ವರ್ ಏನು ಹೇಳ್ತಾರೆ ಎಂಬುದೇ ಎಲ್ಲರ ಕುತೂಹಲ

ಮುಂದಿನ ಸುದ್ದಿ
Show comments