Publish Date: Fri, 08 Sep 2023 (20:00 IST)
Updated Date: Fri, 08 Sep 2023 (20:02 IST)
ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದಲ್ಲಿ ಇಂದಿನಿಂದ 5 ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಕಡೆ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಕರಾವಳಿ ಬಹುತೇಕ ಕಡೆಗಳಲ್ಲಿ ಬಾರೀ ಮಳೆಯಾಗಲಿದೆ.ಉತ್ತರ ಒಳನಾಡಿನ ರಾಯಚೂರು, ಬೀದರ್, ಕೊಪ್ಪಳ, ಕಲಬುರ್ಗಿ, ವಿಜಯಪುರ ಹಾಗೂ ದ.ಒಳನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ.ಇನ್ನು ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲು ಭಾರೀ ಮಳೆ ಮುನ್ಸೂಚನೆ ನೀಡಲಾಗಿದ್ದು, ದಕ್ಷಿಣ ಕನ್ನಡ, ಉತ್ತರಕನ್ನಡ ಉಡುಪಿ ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.