ಬರಗಾಲದಿಂದ ಬರಗೆಟ್ಟ ಬೆಂಗಳೂರಿಗೆ ಮಳೆಯ ಭರವಸೆ

Krishnaveni K
ಮಂಗಳವಾರ, 16 ಏಪ್ರಿಲ್ 2024 (09:56 IST)
ಬೆಂಗಳೂರು: ಕಳೆದ ಮೂರು-ನಾಲ್ಕು ತಿಂಗಳಿನಿಂದ ನೀರಿಲ್ಲದೇ ಬೆಂಗಳೂರಿಗರು ಬೇಸತ್ತು ಹೋಗಿದ್ದಾರೆ. ನೀರಿಲ್ಲದೇ ಜನ ಜೀವನವೇ ಬದಲಾಗಿದೆ.

ಆದರೆ ಇದೀಗ ಹವಾಮಾನ ಇಲಾಖೆಯ ವರದಿ ಕೊಂಚ ಸಮಾಧಾನ ಮೂಡಿಸುವಂತಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಈ ಬಾರಿ ನೀರಿಲ್ಲದೇ ಬೇಸಿಗೆ ತುಸು ದೀರ್ಘವೆನಿಸಿತ್ತು. ವಿಪರೀತ ಉರಿಬಿಸಿಲು ಮನುಷ್ಯರು ಮಾತ್ರವಲ್ಲ, ಸಸ್ಯ, ಪ್ರಾಣಿ ಸಂಕುಲಗಳಿಗೂ ಭಾರೀ ತೊಂದರೆಯಾಗಿದೆ.

ಕಳೆದ ಬಾರಿ ವಾಡಿಕೆಯಂತೆ ಮಳೆಯಾಗದಿರುವುದೇ ನೀರಿನ ಕೊರತೆಗೆ ಕಾರಣ. ಅದರಲ್ಲೂ ಬೆಂಗಳೂರಿನಲ್ಲಿ ಮಳೆಯಾಗಿದ್ದೇ ಕಡಿಮೆ. ಈ ಬಾರಿ ಜೂನ್-ಸೆಪ್ಟೆಂಬರ್ ಅವಧಿಯಲ್ಲಿ ಸರಾಸರಿ ವಾಡಿಕೆ ಮಳೆ ಪ್ರಮಾಣ 85.2 ಸೆಂ.ಮೀ. ನಷ್ಟಿರಲಿದೆ ಎಂದು ತಿಳಿದುಬಂದಿದೆ. ಹೀಗಾಗಿ ಈ ಬಾರಿ ಸುದೀರ್ಘ ಅವಧಿಯ ಮಳೆಯಾಗಲಿದೆ.

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕರ್ನಾಟಕದ ಕೆಲವೆಡೆ ವರುಣನ ಆಗಮನವಾಗಿತ್ತು. ಹಾಗಿದ್ದರೂ ಬೇಸಿಗೆಯ ದಗೆ ಕಡಿಮೆಯಾಗಿಲ್ಲ. ಏಪ್ರಿಲ್ 18 ರ ನಂತರ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

ವಿಶೇಷವೆಂದರೆ ಈ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಕೂಡಾ ಸೇರಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಕೊಂಚ ಮೋಡ ಕವಿದ ವಾತಾವರಣದಂತಿತ್ತು. ಇದೀಗ ಮಳೆಯಾಗುವ ಸೂಚನೆ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನ್ರೇಗಾ ಬಗ್ಗೆ ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಲು ಕಾಂಗ್ರೆಸ್ ಸರ್ಕಾರ ಹೊರಟಿತ್ತು: ಶಿವರಾಜ್ ಸಿಂಗ್ ಚೌಹಾಣ್

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments