Webdunia - Bharat's app for daily news and videos

Install App

ಬರಗಾಲದಿಂದ ಬರಗೆಟ್ಟ ಬೆಂಗಳೂರಿಗೆ ಮಳೆಯ ಭರವಸೆ

Krishnaveni K
ಮಂಗಳವಾರ, 16 ಏಪ್ರಿಲ್ 2024 (09:56 IST)
ಬೆಂಗಳೂರು: ಕಳೆದ ಮೂರು-ನಾಲ್ಕು ತಿಂಗಳಿನಿಂದ ನೀರಿಲ್ಲದೇ ಬೆಂಗಳೂರಿಗರು ಬೇಸತ್ತು ಹೋಗಿದ್ದಾರೆ. ನೀರಿಲ್ಲದೇ ಜನ ಜೀವನವೇ ಬದಲಾಗಿದೆ.

ಆದರೆ ಇದೀಗ ಹವಾಮಾನ ಇಲಾಖೆಯ ವರದಿ ಕೊಂಚ ಸಮಾಧಾನ ಮೂಡಿಸುವಂತಿದೆ. ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಈ ಬಾರಿ ನೀರಿಲ್ಲದೇ ಬೇಸಿಗೆ ತುಸು ದೀರ್ಘವೆನಿಸಿತ್ತು. ವಿಪರೀತ ಉರಿಬಿಸಿಲು ಮನುಷ್ಯರು ಮಾತ್ರವಲ್ಲ, ಸಸ್ಯ, ಪ್ರಾಣಿ ಸಂಕುಲಗಳಿಗೂ ಭಾರೀ ತೊಂದರೆಯಾಗಿದೆ.

ಕಳೆದ ಬಾರಿ ವಾಡಿಕೆಯಂತೆ ಮಳೆಯಾಗದಿರುವುದೇ ನೀರಿನ ಕೊರತೆಗೆ ಕಾರಣ. ಅದರಲ್ಲೂ ಬೆಂಗಳೂರಿನಲ್ಲಿ ಮಳೆಯಾಗಿದ್ದೇ ಕಡಿಮೆ. ಈ ಬಾರಿ ಜೂನ್-ಸೆಪ್ಟೆಂಬರ್ ಅವಧಿಯಲ್ಲಿ ಸರಾಸರಿ ವಾಡಿಕೆ ಮಳೆ ಪ್ರಮಾಣ 85.2 ಸೆಂ.ಮೀ. ನಷ್ಟಿರಲಿದೆ ಎಂದು ತಿಳಿದುಬಂದಿದೆ. ಹೀಗಾಗಿ ಈ ಬಾರಿ ಸುದೀರ್ಘ ಅವಧಿಯ ಮಳೆಯಾಗಲಿದೆ.

ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಬೇಸಿಗೆ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕರ್ನಾಟಕದ ಕೆಲವೆಡೆ ವರುಣನ ಆಗಮನವಾಗಿತ್ತು. ಹಾಗಿದ್ದರೂ ಬೇಸಿಗೆಯ ದಗೆ ಕಡಿಮೆಯಾಗಿಲ್ಲ. ಏಪ್ರಿಲ್ 18 ರ ನಂತರ ಮತ್ತೆ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

ವಿಶೇಷವೆಂದರೆ ಈ ಪಟ್ಟಿಯಲ್ಲಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಕೂಡಾ ಸೇರಿದೆ. ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಕೊಂಚ ಮೋಡ ಕವಿದ ವಾತಾವರಣದಂತಿತ್ತು. ಇದೀಗ ಮಳೆಯಾಗುವ ಸೂಚನೆ ಸಿಕ್ಕಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments