Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ರಾತ್ರಿ ಮಳೆ, ಕರ್ನಾಟಕದಲ್ಲಿ ಇನ್ನಷ್ಟು ಮಳೆ

Krishnaveni K
ಮಂಗಳವಾರ, 7 ಮೇ 2024 (09:08 IST)
ಬೆಂಗಳೂರು: ಬಿಸಿಲ ತಾಪದಿಂದ ಬಳಲಿದ್ದ ಬೆಂಗಳೂರಿಗೆ ಮತ್ತೆ ಮಳೆರಾಯ ತಂಪೆರಚಿದ್ದಾನೆ. ನಿನ್ನೆ ರಾತ್ರಿಯೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದೆ. ಕರ್ನಾಟಕದ ಹಲವೆಡೆ ಮಳೆಯಾಗಿದೆ.

ಮೇ 5 ರಿಂದ ಬೆಂಗಳೂರಿನಲ್ಲಿ ಮಳೆಯಾಗಬಹುದು ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಮೊನ್ನೆ ಒಂದು ದಿನ ಬಿಡುವು ಪಡೆದಿದ್ದ ವರುಣ ನಿನ್ನೆ ಬೆಂಗಳೂರಿಗೆ ಬಂದಿಳಿದಿದ್ದಾನೆ. ಭಾರೀ ಮಳೆಗೆ ಕೆಲವೆಡೆ ಮರಗಳು ಧರೆಗುಳಿದಿದ್ದು ಸಣ್ಣಪುಟ್ಟ ಹಾನಿಯಾದ ಬಗ್ಗೆ ವರದಿಯಾಗಿದೆ.

ಸತತ ಬಿಸಿಲಿನಿಂದ ಬೇಸತ್ತಿದ್ದ ಜನಕ್ಕೆ ಈ ಮಳೆ ಮುದ ನೀಡಿದೆ. ಕೇವಲ ಬೆಂಗಳೂರಿನಲ್ಲಿ ಮಾತ್ರವಲ್ಲ, ಕರ್ನಾಟಕದ ಹಲವೆಡೆ ಅಲ್ಲಲ್ಲಿ ಮಳೆಯಾಗಿದೆ.  ಇಂದೂ ಕೂಡಾ ಮೋಡ ಕವಿದ ವಾತಾವರಣವಿದ್ದು ಮಳೆಯಾಗುವ ಮುನ್ಸೂಚನೆಯಿದೆ.  ಮೇ 10 ರವರೆಗೂ ಮಳೆಯಾಗುವ ಸಾಧ‍್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ನಿನ್ನೆ ಸಂಜೆಯಿಂದಲೇ ಮಳೆ ಅಬ್ಬರಿಸಿತ್ತು. ಗಾಳಿ ಸಮೇತ ಮಳೆಯಾಗಿದ್ದು 25 ಕ್ಕೂ ಹೆಚ್ಚು ಮರಗಳು ಧರಾಶಾಯಿಯಾಗಿವೆ. ಬಿಟಿಎಂ ಲೇಔಟ್, ಯಶವಂತಪುರ, ಜಯನಗರ, ಕೋರಮಂಗಲ, ಬಸವನಗುಡಿ, ಮಲ್ಲೇಶ್ವರಂ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments