Daily Horoscope

ದಕ್ಷಿಣ ಕನ್ನಡದಲ್ಲಿ ಮಳೆ ಅಬ್ಬರ

Webdunia
ಗುರುವಾರ, 16 ಆಗಸ್ಟ್ 2018 (16:45 IST)
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರಿದೆ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಭಾರಿ ಮಳೆ ಆಗುತ್ತಿರುವ ಕಾರಣ ಜನ ಜೀವನ ಅಸ್ತವ್ಯಸ್ತ ಗೊಂಡಿದೆ. ಕುಮಾರಧಾರ ಹಾಗೂ ನೇತ್ರಾವತಿ ನದಿಗಳು ಉಕ್ಕಿ ಹರಿಯುತ್ತಿದ್ದು, ಅಪಾಯದ ಮಟ್ಟ ತಲುಪಿವೆ.

ನದಿ ಪಾತ್ರದ  ಜನರಿಗೆ ಎಚ್ಚರಿಕೆ  ಇಂದ ಇರುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಬಂಟ್ವಾಳ ಬಳಿ ಜಕ್ರಿಬೆಟ್ಟು ಗೂಡಿನ  ಬಳಿ ಮುಂತಾದ ಕಡೆಗಳಲ್ಲಿ ನದಿ ನೀರು ಪೇಟೆಯನ್ನು ಆವರಿಸಿದೆ. ಕುಕ್ಕೆ ಸುಬ್ರಮಣ್ಯ ದ್ವೀಪವಾಗಿದೆ.  ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಭೂಮಿ ಜಲಾವೃತ ಆಗಿದ್ದು, ಕೃಷಿ ಚಟುವಟಿಕೆ ಸಂಪೂರ್ಣ ಸ್ಥಗಿತಗೊಂಡಿದೆ. ಕಳೆದ ಕೆಲವು ದಿನಗಳಿಂದ ಸುರಿದ ಭಾರಿ ಮಳೆಗೆ ಕೋಟ್ಯಂತರ ರುಪಾಯ ನಷ್ಟವಾಗಿದೆ.

ಭೂ ಕುಸಿತದ  ಹಿನ್ನಲೆಯಲ್ಲಿ ಶಿರಾಡಿ ಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಬಂದ್ ಮಾಡಲಾಗಿದೆ. ಮಂಗಳೂರು ಮಡಿಕೇರಿ ರಸ್ತೆಯಲ್ಲಿ  ಸಂಪಾಜೆ ಬಳಿ ರಸ್ತೆಯಲ್ಲಿ ಬಿರುಕು ಹಾಗೂ ಭೂ ಕುಸಿತ ಹಿನ್ನಲೆಯಲ್ಲಿ ಈ ಮಾರ್ಗದಲ್ಲೂ  ರಸ್ತೆ ಸಂಚಾರ ಬಂದ್ ಮಾಡಲಾಗಿದೆ. ಮಂಗಳೂರು ಬೆಂಗಳೂರು ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ವಾಹನ ದಟ್ಟಣೆ ಜಾಸ್ತಿ ಆಗಿದೆ. ಧರ್ಮಸ್ಥಳ ಕುಕ್ಕೆ ಸುಬ್ರಮಣ್ಯ ಆಗಮಿಸುವ ಭಕ್ತರು ಮಳೆ ಕಡಿಮೆ ಅದ ಮೇಲೆ ಪ್ರವಾಸ ಮಾಡಿದರೆ ಸಂಕಷ್ಟದಿಂದ ಪಾರು ಆಗಬಹುದಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments