ರಾತ್ರಿ ಸುರಿದ ಮಳೆಗೆ ಬೆಂಗಳೂರು ತತ್ತರ

Webdunia
ಮಂಗಳವಾರ, 7 ನವೆಂಬರ್ 2023 (13:44 IST)
ಬೆಂಗಳೂರಲ್ಲಿ ‌ತಡರಾತ್ರಿ ಸುರಿದ  ಬಾರೀ ಮಳೆ ಹಿನ್ನೆಲೆ ಯಲಹಂಕ ಬಳಿಯ ಕೇಂದ್ರಿಯ ವಿಹಾರ ಅಪಾರ್ಟ್ಮೆಂಟ್ ಗೆ ಮಳೆ ನೀರು ನುಗ್ಗಿದೆ.ಅಪಾರ್ಟ್ಮೆಂಟ್ ಬಳಿ ಬಂದು ಅಗ್ನಿಶಾಮಕ ದಳ ನೀರು ತೆರವು ಮಾಡಿದೆ.ಮುಂಜಾಗ್ರತಾ ಕ್ರಮವಾಗಿ ಅಪಾರ್ಟ್ ಮೆಂಟ್ ಬಳಿ ಒಂದು ಅಗ್ನಿಶಾಮಕ ದಳ ವಾಹನ ನಿಯೋಜನೆ ಮಾಡಿತ್ತು.ಅಪಾರ್ಟ್ಮೆಂಟ್ ನ ಬೇಸ್ಮೆಂಟ್ ನ್ನ ಕಾರು, ಬೈಕ್ ಗಳು ಮುಳುಗಿದ್ದು,ಮಳೆ ನೀರನ್ನ ಲ ಅಗ್ನಿಶಾಮಕ ಸಿಬ್ಬಂದಿ ತೆರವುಮಾಡಿದ್ದಾರೆ.
 
ಮಳೆಯಿಂದಾಗಿ ರಸ್ತೆಗಳು ಕೆರೆಯಂತಾಗಿದ್ದು,ವಾಹನಸವಾರರು ಪರದಾಟ ನಡೆಸಿದ್ದಾರೆ.ಈಗ
ಹಲವು ಅಂಡರ್ ಪಾಸ್ ಗಳಲ್ಲಿ ಮೊಣಕಾಲುದ್ದ ನೀರು ನಿಂತಿದೆ.ಮಲ್ಲೇಶ್ವರಂ, ಶಾಂತಿನಗರ, ಮೈಸೂರು ಬ್ಯಾಂಕ್ , ಟೌನ್ ಹಾಲ್ ಸೇರಿ ಹಲವೆಡೆ ಧಾರಕಾರ ಮಳೆಯಾಗಿದೆ.ಸಂಜೆ ಸಾಧಾರಣವಾಗಿ ಆರಂಭವಾದ ಮಳೆ ನಂತರ ಕೊಂಚ ರಿಲೀಪ್ ಕೊಟ್ಟಿತ್ತು.ರಾತ್ರಿಯಾಗುತ್ತಿದ್ದಂತೆ ಮತ್ತೆ ಮಳೆ ಜೋರಾಗಿದೆ.ಮಳೆಯಿಂದಾಗಿ  ಶ್ರೀರಾಂಪುರ ಅಂಡರ್ ಪಾಸ್ ,ಬಾಣಸವಾಡಿ ಬಳಿಯ ಲಿಂಗರಾಜಪುರಂ ಫ್ಲೈ ಓವರ್ ಕೆಳಗಿನ ಅಂಡರ್ ಪಾಸ್ ಜಲಾವೃತವಾಗಿದೆ.

ಫ್ರೆಜರ್ ಟೌನ್ ನಿಂದ ಹೆಣ್ಣೂರು ಮುಖ್ಯರಸ್ತೆಯಲ್ಲಿ ಬರುವ ಮೇಲ್ಸೇತುವೆಯ ಅಂಡರ್ ಪಾಸ್ ಜಲಾವೃತ ಆದ್ದ ಹಿನ್ನೆಲೆ ವಾಹನ ಸವಾರರು ಪರದಾಟ ನಡೆಸಿದ್ದಾರೆ.ಕುರುಬರ ಹಳ್ಳಿಯಲ್ಲಿ ಮನೆಗಳಿಗೆ  ನೀರು ನುಗ್ಗಿದೆ.ಮನೆಗಳಿಗೆ ಮಳೆನೀರು ನುಗ್ಗಿ ಪಾತ್ರೆ, ಸಿಲೆಂಡರ್, ಹಾಸಿಗೆ ಎಲ್ಲವೂ ನೀರ್ಪಾಲಾಗಿದೆ.ಮನೆಗಳಿಗೆ ನುಗಿದ್ದ ನೀರನ್ನು ತೆರವು ಮಾಡೋದೆ ಒಂದು ಕೆಲಸವಾಗಿತ್ತು.ಬಿಬಿಎಂಪಿ,  ಸರ್ಕಾರಕ್ಕೆ ಜನತೆ ಹಿಡಿಶಾಪ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪ್ತರ ಜತೆ ಔತಣಕೂಟ ನಡೆಸಿದ ಸಿಎಂ ಸಿದ್ದರಾಮಯ್ಯ, ಪ್ರಮುಖ ವಿಷಯಗಳ ಬಗ್ಗೆ ಚರ್ಚೆ

ಭವಿಷ್ಯದಲ್ಲಿ ಅಧಿಕಾರಿಗಳಬೇಕಿದ್ದವರ ಕಳ್ಳಾಟ ಪರೀಕ್ಷೆಯಲ್ಲಿ ಬಯಲು, Video

Karnataka Weather: ಮಳೆಗಾಗಿ ಕಾಯುತ್ತಿದ್ದವರಿಗೆ ಗುಡ್‌ನ್ಯೂಸ್‌, ಈ ಜಿಲ್ಲೆಗಳಲ್ಲಿ ಮುಂದಿನ 7 ದಿನ ಮಳೆ

ಯುವಜನತೆಗೆ ಯುವನಿಧಿ ಆಸರೆ: ಸೇವಾ ಸಿಂಧುವಿನಲ್ಲಿ ನೋಂದಾಯಿಸಲು ದಿನೇಶ್‌ ಗೂಳಿಗೌಡ ಮನವಿ

ಕಾನೂನುಬಾಹಿರವಾಗಿ ಕಾಂಗ್ರೆಸ್ ಭವನಕ್ಕೆ ನಿವೇಶನ ವಿರುದ್ಧ ಬಿಜೆಪಿ ಹೋರಾಟ

ಮುಂದಿನ ಸುದ್ದಿ
Show comments