Webdunia - Bharat's app for daily news and videos

Install App

ಇನ್ನೂ ಮೂರು ದಿನ ರಾಜ್ಯದಲ್ಲಿ ಮಳೆ: ಹವಾಮಾನ ಇಲಾಖೆ

Webdunia
ಗುರುವಾರ, 14 ಅಕ್ಟೋಬರ್ 2021 (20:48 IST)
ಬೆಂಗಳೂರು: ಕಳೆದ ಒಂದು ವಾರದಿಂದ ಎಡೆಬಿಡಡೆ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಸಾಧ್ಯತೆಗಳಿವೆ. ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರ ದಲ್ಲಿ ಉಂಟಾಗಿರುವ ಸುಳಿಗಾಳಿಯ ಪರಿಣಾಮದಿಂದ ರಾಜ್ಯದಲ್ಲಿ ಮೋಡಕವಿದ ವಾತಾವರಣವಿದ್ದು, ಬುಧವಾರ ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 
 
ಕಳೆದೆರಡು ದಿನಗಳಿಂದಲೂ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿದೆ. ಇದರಿಂದ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿ ತೊಂದರೆ ಉಂಟಾಗಿರುವುದು ವರದಿಯಾಗಿದೆ. ನೈರುತ್ಯ ಮುಂಗಾರು ಮರಳುವಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇನ್ನೆರಡು ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಹವಾಮಾನ ತಜ್ಞರು ಸಹ ತಿಳಿಸಿದ್ದಾರೆ.
 
ಮುಂಗಾರು ಮರಳುವಾಗ ಮತ್ತು ಈಶಾನ್ಯ ಹಿಂಗಾರು ಆರಂಭವಾಗುವ ಪರ್ವಕಾಲದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವುದು ವಾಡಿಕೆ. ಅದೇ ರೀತಿ ಈಗಲೂ ಮಳೆ ಮುಂದುವರೆದಿದೆ. ಅಕ್ಟೋಬರ್‌ ತಿಂಗಳಲ್ಲಿ  ವಾಡಿಕೆಗಿಂತ ಶೇ.50ರಷ್ಟು ಹೆಚ್ಚು ಮಳೆಯಾಗಲಿದೆ. ಈಗಾಗಲೇ ರಾಜ್ಯದಲ್ಲಿ ಬಿದ್ದಿದೆ. ಅಕ್ಟೋಬರ್ 16ರ ನಂತರ ಮಳೆ ಇಳಿಮುಖವಾಗಲಿದೆ ಎಂದು ಹವಮಾನ ತಜ್ಞರು ಹೇಳಿದ್ದಾರೆ. 
 
ಚಂಡಮಾರುತ ಒಡಿಶಾ ಕಡೆಗೆ: 
 
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದು ಚಂಡಮಾರುತವಾಗಿ ಪರಿವರ್ತನ ಯಾಗುತ್ತಿದೆ. ಆದರೂ ರಾಜ್ಯದ ಮೇಲೆ ಅದರ ನೇರ ಪರಿಣಾಮ ಉಂಟಾಗುವುದಿಲ್ಲ, ಚಂಡಮಾರುತವು ಒಡಿಶಾ ಕಡೆಗೆ ಚಲಿಸಿದೆ  ಹೀಗಾಗಿ ಅಕ್ಟೊಬರ್ 16ರ ನಂತರ ಮತ್ತೆ ವಾತಾವರಣದಲ್ಲಿ ಬದಲಾವಣೆ ಉಂಟಾಗಿ ಹಿಂಗಾರು ಮಳೆ ಆರಂಭವಾಗಲಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾತೆ ಹಂಚಿಕೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಡೇವಿಡ್ ಡಿಸೋಜಾ ಹತ್ಯೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಸ್ಪಿ ಹರಿರಾಮ್ ಶಂಕರ್‌

ಜೆಡಿಎಸ್‌ ಪಾದಯಾತ್ರೆ ಅಲ್ಲ, ಕುಮಾರಸ್ವಾಮಿ ಮಾಡಿದ ಪಾಪದ ಪ್ರಾಯಶ್ಚಿತ ಯಾತ್ರೆ: ಸಚಿವ ಬಾಲಕೃಷ್ಣ

ನೈಸ್ ಕಂಪನಿ ಟೋಲ್ ಸಂಗ್ರಹ ಮಾಡುವುದನ್ನು ನಿಲ್ಲಿಸಬೇಕು

ಕರ್ನಾಟಕ ಎಸ್‌ಐಆರ್ ಗಡುವು ಆಗಸ್ಟ್ 17ಕ್ಕೆ ವಿಸ್ತರಣೆ, ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿ

ಮುಂದಿನ ಸುದ್ದಿ
Show comments