Webdunia - Bharat's app for daily news and videos

Install App

ಜುಲೈ 23ರಂದು ಬಂಗಾಳ ಉಪಸಾಗರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ

Webdunia
ಬುಧವಾರ, 21 ಜುಲೈ 2021 (20:44 IST)
ಜುಲೈ 23ರಂದು ಬಂಗಾಳ ಉಪಸಾಗರದ ವಾಯುವ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗುವ ಹೆಚ್ಚಿನ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಸ್ಥಳಗಳಲ್ಲಿ ಜುಲೈ 25ರವರೆಗೆ ಭಾರಿ ಮಳೆಯಾಗುವ ಹೆಚ್ಚಿನ ಸಾಧ್ಯತೆಯಿದೆ. 
 
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಹಲವೆಡೆ ಗುಡುಗು ಸಹಿತ ವ್ಯಾಪಕ ಮಳೆ ನಿರೀಕ್ಷಿಸಲಾಗಿದೆ. ಜುಲೈ 22ರಂದು ಯೆಲ್ಲೋ ಅಲರ್ಟ್, ಜುಲೈ 23 ಮತ್ತು 24ರಂದು ಆರೆಂಜ್ ಅಲರ್ಟ್ ಕೊಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ಜುಲೈ 22, 23 ಮತ್ತು 24ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಬೀದರ್, ವಿಜಯಪುರ, ಯಾದಗಿರಿ ಹಾಗೂ ಕಲಬುರ್ಗಿ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಜುಲೈ 22 ಮತ್ತು 23ರಂದು ಯೆಲ್ಲೋ ಅಲರ್ಟ್ ಘೊಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
 
ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಬುಧವಾರ ನೈರುತ್ಯ ಮುಂಗಾರು ಸಾಮಾನ್ಯವಾಗಿತ್ತು. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು, ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗಿದೆ. ಮುಖ್ಯವಾಗಿ, ಶಿವಮೊಗ್ಗದ ತೀರ್ಥಹಳ್ಳಿಯಲ್ಲಿ 9 ಸೆಂ.ಮೀ, ಆಗುಂಬೆಯಲ್ಲಿ 8 ಸೆಂ.ಮೀ, ಉತ್ತರ ಕನ್ನಡದ ಕದ್ರಾಾ, ಶಿವಮೊಗ್ಗದ ತಾಳಗುಪ್ಪದಲ್ಲಿ ತಲಾ 7 ಸೆಂ.ಮೀ, ಉಡುಪಿಯ ಕೊಲ್ಲೂರಿನಲ್ಲಿ 6 ಸೆಂ.ಮೀ, ಉತ್ತರ ಕನ್ನಡದ ಸಿದ್ದಾಪುರ, ಧರ್ಮಸ್ಥಳ, ಶಿವಮೊಗ್ಗದ ಹೊಸನಗರದಲ್ಲಿ ತಲಾ 5 ಸೆಂ.ಮೀ. ಮಳೆಯಾಗಿದೆ ಎಂದು ಮಾಹಿತಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರ್ಖಂಡ್ ವಿದ್ಯಾರ್ಥಿ ಪ್ರತಿಭಟನೆ: ಸೋನಮ್ ವಾಂಗ್ಚುಕ್ ಕರೆ ಬರುತ್ತಿದ್ದ ಹಾಗೇ ಉಪವಾಸ ಸತ್ಯಾಗ್ರಹ ನಿಲ್ಲಿಸಿದ ದೇವೇಂದ್ರ ನಾಥ್

Karnataka Weather:ಮುಂದಿನ ಈ ಭಾಗದಲ್ಲಿ ಭಾರೀ ಮಳೆ, ಯೆಲ್ಲೂ ಅಲರ್ಟ್‌ ಘೋಷಿಸಿದ ಜಿಲ್ಲೆಗಳ ಮಾಹಿತಿ

ತಿನ್ನಕ್ಕೆ ಕೊಡೋ... ಕಬ್ಬಿನ ಲಾರಿ ಅಡ್ಡಗಟ್ಟಿ ಕಾಡಾನೆ ಮಾಡಿದ್ದೇನು ನೋಡಿ Video

ನಾಗೇಂದ್ರ ರಾಜೀನಾಮೆ ಕೊಡದಿದ್ದರೆ ಸದನ ನಡೆಸಲು ಬಿಡೆವು: ಛಲವಾದಿ ನಾರಾಯಣಸ್ವಾಮಿ

ಮನೆ ಹೊರಗೇ ಗಂಟೆಗಟ್ಟಲೆ ಕಾದು ನಿಂತಿದ್ದ ಅಮ್ಮ, ಮನೆ ಒಳಗಿದ್ದ ಮಗಳು ಪ್ರಿಯಕರನ ಜೊತೆ... Video

ಮುಂದಿನ ಸುದ್ದಿ
Show comments