Webdunia - Bharat's app for daily news and videos

Install App

ರೈತರ ಬದುಕನ್ನು ಛಿದ್ರಗೊಳಿಸಿದ ಮಳೆ!

Webdunia
ಶನಿವಾರ, 27 ನವೆಂಬರ್ 2021 (10:03 IST)
ಚಿಕ್ಕಬಳ್ಳಾಪುರ : ಹೊಲಗಳಲ್ಲೇ ಮೊಳಕೆಯೊಡೆದ ರಾಗಿ, ನೆಲಗಡಲೆ, ಮೇವಾಗಿ ಬಳಕೆಯಾಗುತ್ತಿದ್ದ ರಾಗಿ ಪೈರು,
ಮುಸುಕಿನ ಜೋಳ ಮಣ್ಣು ಪಾಲು ನಾನಾ ರೋಗಗಳಿಗೆ ತುತ್ತಾದ ಟೊಮೇಟೊ, ಮೂಲಂಗಿ, ತರಕಾರಿ ಬೆಳೆಗಳು ಇರುವ ಬೆಳೆಗಳನ್ನು ರಕ್ಷಿಸಲಾಗದೆ ರೈತರ ಪರದಾಟ.ಇದು ಸತತ 2 ತಿಂಗಳ ಮಳೆ ನಂತರ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ರೈತರ ದಯನೀಯ ಸ್ಥಿತಿ.
2019-2020ರಲ್ಲಿ ಕೊರೊನಾ ಬಿಟ್ಟೂ ಬಿಡದೆ ಕಾಡಿ ಕೃಷಿಕರ ಬದುಕು ಬೀದಿಗೆ ಬಿದ್ದಿತ್ತು. 2021ರಲ್ಲಿಯಾದರೂ ಉತ್ತಮ ಬೆಳೆ ಬೆಳೆಯಬಹುದು ಎಂದು ರೈತರು ನಿರೀಕ್ಷಿಸಿದ್ದರು. ಆದರೆ ಈ ಬಾರಿ ಬಿಟ್ಟೂ ಬಿಡದೆ ಕಾಡಿದ ಮಳೆರಾಯ ರೈತರ ಬದುಕನ್ನು ಮೂರಾಬಟ್ಟೆಯಾಗಿಸಿದೆ.
ಬೆಳೆ ಬಿತ್ತಲು ಮಾಡಿರುವ ವೆಚ್ಚವನ್ನು ಆಧರಿಸಿ ಸರ್ಕಾರ, ಬೆಳೆ ಹಾನಿ ಪರಿಹಾರ ನೀಡಬೇಕೆಂಬುದು ರೈತರ ಆಗ್ರಹವಾಗಿದೆ. ಪರಿಹಾರ ಸಿಗೋದು ಯಾವಾಗ? ಜಿಲ್ಲೆಯಲ್ಲಾದ ಮಳೆ ನಷ್ಟ ವೀಕ್ಷಿಸಲು ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವರು, ಮಾಜಿ ಸಿಎಂಗಳು ಬಂದು ಹೋದರೂ ರೈತರಿಗೆ ಇದುವರೆಗೂ ಪರಿಹಾರ ಸಿಕ್ಕಿಲ್ಲ. ಸಿಕ್ಕರೂ ಎಷ್ಟು ಸಿಗುತ್ತದೆ ಎಂಬುದರ ಬಗ್ಗೆ ಖಾತರಿಯಿಲ್ಲ. ಹೀಗಾಗಿ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments