Webdunia - Bharat's app for daily news and videos

Install App

ವಾರಾಂತ್ಯದ ವರೆಗೂ ರಾಜ್ಯದ ಹಲವೆಡೆ ಮಳೆ, ಗುಡುಗು-ಸಿಡಿಲಿನ ಅಲರ್ಟ್!

Webdunia
ಗುರುವಾರ, 24 ಮಾರ್ಚ್ 2022 (21:48 IST)
ಕರಾವಳಿ ಪ್ರದೇಶದ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ಸುತ್ತಲಿನ ಜಿಲ್ಲೆಗಳಿಗೆ ವಾರಾಂತ್ಯದವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು ಮುಂದಿನ ಎರಡು ದಿನ ಗುಡುಗು ಸಿಡಿಲಿನ ಅಲರ್ಟ್ ನೀಡಿದೆ.
 
ಈ ಕುರಿತು ಮಾತನಾಡಿದ ಬೆಂಗಳೂರಿನ ಹವಾಮಾನ ಕೇಂದ್ರದ ತಜ್ಞ ಸದಾನಂದ ಅಡಿಗ, ಕರಾವಳಿಯಲ್ಲಿ ಇಂದು ಹಲವೆಡೆ ಮಳೆಯಾಗಿದ್ದು. ಒಂದೆರಡು ಕಡೆ ಭಾರೀ ಮಳೆಯಾಗಿದೆ. ನಾಳೆ ಹಾಗೂ ನಾಡಿದ್ದು ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಾರ್ಚ್ 27, ಹಾಗೂ 28 ರಂದು ಉಡುಪಿ ಹಾಗೂ ದಕ್ಷಿಣ ಜಿಲ್ಲೆಗಳ ಒಂದೆರಡು ಕಡೆ ಮಳೆಯಾಗಲಿದೆ ಎಂದಿದ್ದಾರೆ.
 
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಜಿಲ್ಲೆಯ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಇಂದು ಎಲ್ಲ ಕಡೆ ಮಳೆಯಾಗಿದ್ದು. ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಒಂದೆರಡು ಕಡೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. 27, 28 ರಂದು ಪಶ್ಚಿಮ ಘಟ್ಟ ಹಾಗೂ ಚಿತ್ರದುರ್ಗದಲ್ಲಿ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದರು. 
 
ರಾಜಧಾನಿಯಲ್ಲಿ ಮೋಡ ಕವಿದ ವಾತಾವರಣ:
 
ಸಿಲಿಕಾನ್ ಸಿಟಿಯಲ್ಲಿ 33.6 ಡಿಗ್ರಿ ಗರಿಷ್ಟ ಉಷ್ಣಾಂಶ ದಾಖಲಾಗಿದ್ದು, ನಾಳೆ ಮಳೆಯ ಸಾಧ್ಯತೆ ಇಲ್ಲ. ಮೋಡ ಕವಿದ ವಾತಾವರಣ ಇರುವ ಸಾಧ್ಯತೆ ಇದೆ ಎಂದಿದ್ದಾರೆ. 
 
ಚಂಡಮಾರುತ ದುರ್ಬಲ:
 
ಮಧ್ಯ ಮಹಾರಾಷ್ಟ್ರದ ಕೇಂದ್ರ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ, ಆಗ್ನೇಯ ಅರಬ್ಬಿ ಸಮುದ್ರದಲ್ಲಿಯೂ ಮೇಲ್ಮೈ ಸುಳಿಗಾಳಿ ಇದೆ. ಈವರೆಗೆ ಇದ್ದ ವಾಯುಭಾರ ಕುಸಿತ ಮಯನ್ಮಾರ್ ಪ್ರದೇಶದತ್ತ ದುರ್ಬಲಗೊಂಡಿದೆ ಎಂದರು.  
 
ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ:
 
ಕಳೆದ 24 ಗಂಟೆ ಅವಧಿಯಲ್ಲಿ ಕರಾವಳಿಯಲ್ಲಿ ಹಲವೆಡೆ ಮಳೆಯಾಗಿರುವ ವರದಿಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಕೆಲವು ಕಡೆ ಮಳೆ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇದ್ದು, ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 41.2 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕನಿಷ್ಠ ಉಷ್ಣಾಂಶ ಧಾರವಾಡದಲ್ಲಿ 20 ಡಿಗ್ರಿ ಸೆಲ್ಸಿಯಸ್ ಆಗಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments