Select Your Language

Notifications

webdunia
webdunia
webdunia
webdunia

ಇನ್ನೂ ಎರಡು ದಿನ ಮಳೆ ನಿಲ್ಲಲ್ಲ!

ಇನ್ನೂ ಎರಡು ದಿನ ಮಳೆ ನಿಲ್ಲಲ್ಲ!
ಬೆಂಗಳೂರು , ಶನಿವಾರ, 14 ಅಕ್ಟೋಬರ್ 2017 (10:17 IST)
ಬೆಂಗಳೂರು: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ತತ್ತರಿಸಿ ಹೋಗಿರುವ ಬೆಂಗಳೂರು ಸೇರಿದಂತೆ ರಾಜ್ಯದ ಜನತೆಗೆ ಇನ್ನೂ ಎರಡು ದಿನ ಮಳೆ ಕಾಟ ತಪ್ಪಿದ್ದಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ.

 
ಹಲವೆಡೆ ರಸ್ತೆಗಳಿಗೆ ನೀರು ನುಗ್ಗಿದ್ದು ವಾಹನ ಸಂಚಾರ ಕಷ್ಟವಾಗಿದೆ. ನಿನ್ನೆ ರಾತ್ರಿ ಮಳೆ ನೀರಿಗೆ ಕೊಚ್ಚಿ ಹೋಗಿದ್ದ ಅರ್ಚಕ ವಾಸುದೇವ್ ಮೃತದೇಹ ಪತ್ತೆ ಕಾರ್ಯ ಇನ್ನೂ ಮುಂದುವರಿದಿದೆ.

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಒಳಸುಳಿಗಾಳಿ ಎದ್ದಿರುವ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಇನ್ನೂ ಎರಡು ದಿನ ಮಳೆ ಸುರಿಯಲಿದೆ ಎಂದು ಹವಾಮಾನ ವರದಿ ಹೇಳಿದೆ. ಈ ಹಿನ್ನಲೆಯಲ್ಲಿ ಇನ್ನೂ ಎರಡು ದಿನಗಳ ಕಾಲ ಜನತೆ ಎಚ್ಚರವಾಗಿರುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ತಾಯಿ ಸೋನಿಯಾ ಗಾಂಧಿ ಬಾಯಿಯಿಂದಲೇ ಬಂತು ರಾಹುಲ್ ಬಗ್ಗೆ ಈ ನಿರ್ಧಾರ!