Webdunia - Bharat's app for daily news and videos

Install App

ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ , ಹೊರಗೆ ಪ್ರಶ್ನೆಪತ್ರಿಕೆ ಸೋರಿಗೆ: ಕಾಂಗ್ರೆಸ್ ವ್ಯಂಗ್ಯ

Sampriya
ಗುರುವಾರ, 1 ಆಗಸ್ಟ್ 2024 (17:08 IST)
Photo Courtesy X
ಬೆಂಗಳೂರು: ಸೋರುತಿಹುದು ಸಂಸತ್ ಮಾಳಿಗೆ, ಅಜ್ಞಾನದಿಂದ, ಭ್ರಷ್ಟರಿಂದ ಸೋರುತಿಹುಹುದು ದೇಶದ ಮಾಳಿಗೆ. ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ, ಹೊರಗೆ ಪ್ರಶ್ನೆಪತ್ರಿಕೆ ಸೋರಿಕೆ ಎಂದು ಕೇಂದ್ರದ ಬಿಜೆಪೊ ಸರ್ಕಾರವನ್ನು ಕಾಂಗ್ರೆಸ್ ಲೇವಡಿ ಮಾಡಿದೆ.

ಬುಧವಾರ ದೆಹಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹೊಸದಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಮೊಗಸಾಲೆಯಲ್ಲಿ ನೀರು ಸೋರುತ್ತಿದೆ.  ಕಳೆದ ವರ್ಷವಷ್ಟೇ 971 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಡದ ಹವಾಮಾನ ಸ್ಥಿತಿಸ್ಥಾಪಕತ್ವದ ಬಗ್ಗೆ ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ.

ಇದೀಗ ಎಕ್ಸ್‌ನಲ್ಲಿ ಈ ಸಂಬಂಧ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಅಚ್ಚೆ ದಿನಗಳ ವಿಕಾಸದಲ್ಲಿ ವಾರಕ್ಕೆ ಮೂರು ಸೇತುವೆಗಳು ಮುರಿದು ಬೀಳುತ್ತಿವೆ, ದಿನಕ್ಕೊಂದು ರೈಲು ಹಳಿ ತಪ್ಪುತ್ತಿವೆ. ರಾಮಮಂದಿರದೊಳಗೆ ನೀರು ಇಳಿಯುತ್ತಿದೆ, ಸಂಸತ್ ಭವನವೂ ಸೋರುತ್ತಿದೆ. ಮೋದಿ 10 ವರ್ಷದ ಆಡಳಿತದಲ್ಲಿ ಒಂದೇ ಒಂದು ಲೋಪವಿಲ್ಲದೆ ಕೆಲಸವಾಗಿದೆಯೇ ಎಂದು ವ್ಯಂಗ್ಯ ಮಾಡಿದೆ.

ಸೋರುತಿಹುದು ಸಂಸತ್ ಮಾಳಿಗೆ,
ಅಜ್ಞಾನದಿಂದ, ಭ್ರಷ್ಟರಿಂದ ಸೋರುತಿಹುಹುದು ದೇಶದ ಮಾಳಿಗೆ.

ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ, ಹೊರಗೆ ಪ್ರಶ್ನೆಪತ್ರಿಕೆ ಸೋರಿಕೆ!

20,000 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೆಂಟ್ರಲ್ ವಿಸ್ತಾ ಎಂಬ ನೂತನ ಸಂಸತ್ ಭವನದ ಒಳಗೆ ಮೊದಲ ವರ್ಷಕ್ಕೆ ಮಳೆ ನೀರು ಸೋರಿಕೆಯಾಗಿದೆ.

ಅಚ್ಚೆ ದಿನಗಳ ವಿಕಾಸದಲ್ಲಿ
ವಾರಕ್ಕೆ ಮೂರು ಸೇತುವೆಗಳು ಮುರಿದು ಬೀಳುತ್ತಿವೆ,
ದಿನಕ್ಕೊಂದು ರೈಲು ಹಳಿ ತಪ್ಪುತ್ತಿವೆ,
ರಾಮಮಂದಿರದೊಳಗೆ ನೀರು ಇಳಿಯುತ್ತಿದೆ,
ಸಂಸತ್ ಭವನವೂ ಸೋರುತ್ತಿದೆ.

ಮೋದಿಯವರ 10 ವರ್ಷದ ಆಡಳಿತದಲ್ಲಿ ಒಂದೇ ಒಂದು ಲೋಪವಿಲ್ಲದ ಕೆಲಸ ಆಗಿದೆಯೇ?

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments