Webdunia - Bharat's app for daily news and videos

Install App

ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ , ಹೊರಗೆ ಪ್ರಶ್ನೆಪತ್ರಿಕೆ ಸೋರಿಗೆ: ಕಾಂಗ್ರೆಸ್ ವ್ಯಂಗ್ಯ

Sampriya
ಗುರುವಾರ, 1 ಆಗಸ್ಟ್ 2024 (17:08 IST)
Photo Courtesy X
ಬೆಂಗಳೂರು: ಸೋರುತಿಹುದು ಸಂಸತ್ ಮಾಳಿಗೆ, ಅಜ್ಞಾನದಿಂದ, ಭ್ರಷ್ಟರಿಂದ ಸೋರುತಿಹುಹುದು ದೇಶದ ಮಾಳಿಗೆ. ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ, ಹೊರಗೆ ಪ್ರಶ್ನೆಪತ್ರಿಕೆ ಸೋರಿಕೆ ಎಂದು ಕೇಂದ್ರದ ಬಿಜೆಪೊ ಸರ್ಕಾರವನ್ನು ಕಾಂಗ್ರೆಸ್ ಲೇವಡಿ ಮಾಡಿದೆ.

ಬುಧವಾರ ದೆಹಲಿಯಲ್ಲಿ ಸುರಿದ ಭಾರಿ ಮಳೆಯಿಂದಾಗಿ ಹೊಸದಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಮೊಗಸಾಲೆಯಲ್ಲಿ ನೀರು ಸೋರುತ್ತಿದೆ.  ಕಳೆದ ವರ್ಷವಷ್ಟೇ 971 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿರುವ ಕಟ್ಟಡದ ಹವಾಮಾನ ಸ್ಥಿತಿಸ್ಥಾಪಕತ್ವದ ಬಗ್ಗೆ ಕಾಂಗ್ರೆಸ್ ನಾಯಕರು ಲೇವಡಿ ಮಾಡುತ್ತಿದ್ದಾರೆ.

ಇದೀಗ ಎಕ್ಸ್‌ನಲ್ಲಿ ಈ ಸಂಬಂಧ ಪೋಸ್ಟ್‌ ಮಾಡಿರುವ ಕಾಂಗ್ರೆಸ್ ಅಚ್ಚೆ ದಿನಗಳ ವಿಕಾಸದಲ್ಲಿ ವಾರಕ್ಕೆ ಮೂರು ಸೇತುವೆಗಳು ಮುರಿದು ಬೀಳುತ್ತಿವೆ, ದಿನಕ್ಕೊಂದು ರೈಲು ಹಳಿ ತಪ್ಪುತ್ತಿವೆ. ರಾಮಮಂದಿರದೊಳಗೆ ನೀರು ಇಳಿಯುತ್ತಿದೆ, ಸಂಸತ್ ಭವನವೂ ಸೋರುತ್ತಿದೆ. ಮೋದಿ 10 ವರ್ಷದ ಆಡಳಿತದಲ್ಲಿ ಒಂದೇ ಒಂದು ಲೋಪವಿಲ್ಲದೆ ಕೆಲಸವಾಗಿದೆಯೇ ಎಂದು ವ್ಯಂಗ್ಯ ಮಾಡಿದೆ.

ಸೋರುತಿಹುದು ಸಂಸತ್ ಮಾಳಿಗೆ,
ಅಜ್ಞಾನದಿಂದ, ಭ್ರಷ್ಟರಿಂದ ಸೋರುತಿಹುಹುದು ದೇಶದ ಮಾಳಿಗೆ.

ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ, ಹೊರಗೆ ಪ್ರಶ್ನೆಪತ್ರಿಕೆ ಸೋರಿಕೆ!

20,000 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೆಂಟ್ರಲ್ ವಿಸ್ತಾ ಎಂಬ ನೂತನ ಸಂಸತ್ ಭವನದ ಒಳಗೆ ಮೊದಲ ವರ್ಷಕ್ಕೆ ಮಳೆ ನೀರು ಸೋರಿಕೆಯಾಗಿದೆ.

ಅಚ್ಚೆ ದಿನಗಳ ವಿಕಾಸದಲ್ಲಿ
ವಾರಕ್ಕೆ ಮೂರು ಸೇತುವೆಗಳು ಮುರಿದು ಬೀಳುತ್ತಿವೆ,
ದಿನಕ್ಕೊಂದು ರೈಲು ಹಳಿ ತಪ್ಪುತ್ತಿವೆ,
ರಾಮಮಂದಿರದೊಳಗೆ ನೀರು ಇಳಿಯುತ್ತಿದೆ,
ಸಂಸತ್ ಭವನವೂ ಸೋರುತ್ತಿದೆ.

ಮೋದಿಯವರ 10 ವರ್ಷದ ಆಡಳಿತದಲ್ಲಿ ಒಂದೇ ಒಂದು ಲೋಪವಿಲ್ಲದ ಕೆಲಸ ಆಗಿದೆಯೇ?

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments