ಮಳೆಯ ಅವಾಂತರ: ಸೇತುವೆ ಸಂಪೂರ್ಣ ಕುಸಿತ

Webdunia
ಸೋಮವಾರ, 22 ನವೆಂಬರ್ 2021 (21:49 IST)
ಧಾರಾಕಾರ ಮಳೆಗೆ ರಾಮನಗರದ ಕೂಟಗಲ್  ಸೇತುವೆ ಸಂಪೂರ್ಣ ಕುಸಿದು ಬಿದ್ದಿದೆ. ಸೇತುವೆ ಕುಸಿತದಿಂದಾಗಿ ಮೆಳೇಹಳ್ಳಿ ಸೇರಿದಂತೆ ಐದಾರು ಗ್ರಾಮಗಳ ಸಂಪರ್ಕ ಕಡಿತವಾಗಿದೆ.
ಮೆಳೇಹಳ್ಳಿ. ಮಾರೇಗೌಡನದೊಡ್ಡಿ. ಅರಳಿಮಾರದೊಡ್ಡಿ, ಜೋಗಿದೊಡ್ಡಿ ಅಂಕನಹಳ್ಳಿ. ಹುಣಸೆದೊಡ್ಡಿ ಗ್ರಾಮಗಳಿಗೆ ಸಂಪರ್ಕ ಸಂಪೂರ್ಣ ಬಂದ್ ಆಗಿದ್ದು, ಸೇತುವೆ ಕುಸಿದು ಬಿದ್ದ ಹಿನ್ನಲೆಯಲ್ಲಿ  5 ಕಿಲೋ ಮೀಟರ್ ದೂರ ಸಂಚರಿಸಿ ಗ್ರಾಮಗಳಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ. ಅನೇಕ ವರ್ಷಗಳಿಂದ ಸೇತುವೆ ದುಸ್ಥಿತಿಯಲ್ಲಿದ್ದರೂ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದೇ ಇರುವುದೇ ಈಗ ಪರದಾಟಕ್ಕೆ ಕಾರಣವಾಗಿದೆ ಅಂತ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಜೊತೆಗೆ ಹಲವು ಬಾರಿ ಈ ಸಂಬಂಧ ಅಧಿಕಾರಿಗಳ ಬಳಿ ಮನವಿ ಮಾಡಿದ್ರೂ ಕ್ಯಾರೇ ಅಂದಿಲ್ಲ ಅಂತ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೇ ಶೀಘ್ರವಾಗಿ ಸೇತುವೆ ನಿರ್ಮಿಸುವಂತೆ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏನೇ ಹೇಳಿದ್ರೂ ಬಗ್ಗದ ಇರಾನ್ ಗೆ ಡೊನಾಲ್ಡ್ ಟ್ರಂಪ್ ನೀಡಿದ ಫೈನಲ್ ವಾರ್ನಿಂಗ್ ಏನು ಗೊತ್ತಾ video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಬ್ಬಾ ಖುಷಿಯೇ.. ಸೇನಾ ನಾಯಿಯೊಂದಕ್ಕೆ 30 ಸೆಕೆಂಡ್ ಫ್ರೀ ಟೈಂ ಸಿಕ್ಕಾಗ ಏನು ಮಾಡಿತು ನೋಡಿ Video

ಸೀಬೆಕಾಯಿ ಕದ್ದ ತಪ್ಪಿಗೆ ಚಿಕ್ಕ ಹುಡುಗಿಯನ್ನು ಕಂಬಕ್ಕೆ ಕಟ್ಟಿ ಕ್ರೌರ್ಯ Video

ಹೆಲ್ಮೆಟ್ ಹಾಕದೇ ಬೈಕ್ ಚಲಾಯಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸಪ್ಪನ ದರ್ಪ ನೋಡಿ Video

ಮುಂದಿನ ಸುದ್ದಿ
Show comments