Publish Date: Wed, 09 Sep 2026 (20:04 IST)
Updated Date: Wed, 09 Sep 2026 (20:07 IST)
ಬೆಂಗಳೂರು: ನಿರಂತರ ಮಳೆಯ ಕೊರತೆ ಮತ್ತು ತಾಪಮಾನದಲ್ಲಿನ ತೀವ್ರ ಏರಿಕೆಯಿಂದಾಗಿ ಕರ್ನಾಟಕವು ಬಿಗಡಾಯಿಸುತ್ತಿರುವ ಬರ ಪರಿಸ್ಥಿತಿಯನ್ನು ಎದುರಿಸುತ್ತಿದೆ.
ಬೆಂಗಳೂರು ಹಾಗೂ ರಾಜ್ಯದ ಬಹುತೇಕ ಭಾಗಗಳಲ್ಲಿ ತಾಪಮಾನವು 4 ರಿಂದ 5 ಡಿಗ್ರಿ ಸೆಲ್ಸಿಯಸ್ನಷ್ಟು ಏರಿಕೆಯಾಗಿದೆ ಮತ್ತು ಮುಂದಿನ ವಾರ ರಾಜ್ಯದ ಕೆಲವು ಭಾಗಗಳಲ್ಲಿ ತಾಪಮಾನವು 37 ಡಿಗ್ರಿ ಸೆಲ್ಸಿಯಸ್ ತಲುಪುವ ನಿರೀಕ್ಷಿಸಲಾಗಿದೆ.
ಕರ್ನಾಟಕ ಮತ್ತು ದೇಶದ ಇತರ ಹಲವು ಭಾಗಗಳಲ್ಲಿ ಮಳೆಯ ಕೊರತೆಯು ತೀವ್ರಗೊಂಡಿದೆ. ಕೆಲವು ಪ್ರದೇಶಗಳು ಪ್ರವಾಹ ಮತ್ತು ಅದರಿಂದ ಉಂಟಾದ ಅಡಚಣೆಗಳಿಗೆ ತುತ್ತಾಗಿದ್ದರೆ, ದೇಶದ ಬಹುತೇಕ ಭಾಗಗಳು ಅಸಮರ್ಪಕ ಮಳೆಯಿಂದಾಗಿ ಬರಗಾಲದಂತಹ ಪರಿಸ್ಥಿತಿಯನ್ನು ಎದುರಿಸುತ್ತಿವೆ.
ಮಳೆಗಾಲ ಮುಂದುವರಿದಿದ್ದರೂ, ತಾಪಮಾನವು ತೀವ್ರವಾಗಿ ಏರುತ್ತಿದೆ. ಸೆಪ್ಟೆಂಬರ್ ಆರಂಭದಲ್ಲೇ ಬೇಸಿಗೆಯಂತಹ ವಾತಾವರಣ ನಿರ್ಮಾಣವಾಗಿದ್ದು, ತೀವ್ರ ಬಿಸಿಲಿನಿಂದಾಗಿ ಜನರು ಪರದಾಡುವಂತಾಗಿದೆ.
About Writer
ಸಂಪ್ರಿಯ
ಕನ್ನಡ ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷದಲ್ಲಿ ಬೇರೆ ಬೇರೆ ಸಂಸ್ಥೆಗಳಲ್ಲಿ ರಿಪೋರ್ಟರ್ ಆಗಿ, ಸಬ್ ಎಡಿಟರ್ ಆಗಿ, ಇದೀಗ ಕಂಟೆಂಟ್ ರೈಟರ್ ಆಗಿ ವೆಬ್ದುನಿಯಾದಲ್ಲಿ ಕೆಲಸ. ಆಳ್ವಾಸ್ ಕಾಲೇಜಿನಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋಧ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು 2016ನೇ ಸಾಲಿನಲ್ಲಿ ಪಡೆದಿರುತ್ತೇನೆ. ಮನರಂಜನೆ, ಲೈಫ್ಸ್ಟೈಲ್, ರಾಜಕೀಯ ಸುದ್ದಿಗಳ ಬಗ್ಗೆ ವಿಶೇಷ ಆಸಕ್ತಿ. ....
ಮತ್ತಷ್ಟು ಓದಿ