ನಿರಂತರ ಮಳೆ ಬೆಳೆ ಸಮೃದ್ಧಿ

Webdunia
ಬುಧವಾರ, 20 ಅಕ್ಟೋಬರ್ 2021 (15:50 IST)
ಜಿಲ್ಲೆಯಲ್ಲಿ ಪ್ರಮುಖ ಬೆಳೆಯಾಗಿರುವ ರಾಗಿ ಬೆಳೆ ಮಳೆಯಿಲ್ಲದೆ ಬತ್ತಿಹೋಗುತ್ತಾ. ಮಳೆಗಾಗಿ ಮುಗಿಲಕಡೆ ಮುಖಮಾಡಿದ್ದ ರೈತಸಮುದಾಯಕ್ಕೆ ಹೆಚ್ಚಿನ ಮಳೆ ಬಂದಿದೆ. ಜಿಲ್ಲೆಯಲ್ಲಿ ರಾಗಿ ಬೆಳೆ ಹಸಿರುಹೊದಿಕೆಯೊಂದಿಗೆ ಹುಲ್ಲುಹಾಸಾಗಿ ಬೆಳೆಯುತ್ತಿದ್ದು ಬಹುತೇಕ ರೈತರು ಉತ್ತಮ ಇಳುವರಿ ನಿರೀಕ್ಷೆಯಲ್ಲಿದ್ದಾರೆ.
ಜುಲೈ ಮತ್ತು ಆಗಸ್ಟ್‌ನಲ್ಲಿ ರೈತರು ರಾಗಿ ಬಿತ್ತನೆ ಮಾಡಿದ್ದು, ಮಳೆ ಆಗಿರಲಿಲ್ಲ. ನಂತರ ಬಂದಮಳೆಗೆ ರಾಗಿ ಪೈರು ಮೊಳಕೆಯೊಡೆದು ಹುಟ್ಟಿಬಂದಿತ್ತು. ಕಳೆದ ಹದಿನೈದು ದಿನಗಳಿಂದ ಉತ್ತಮ ಮಳೆ ಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.
ಬಯಲುಸೀಮೆಯ ಪ್ರದೇಶವಾಗಿರು ವುದರಿಂದ ಯಾವುದೇ ನದಿಮೂಲಗಳು, ಡ್ಯಾಮ್‌ ಗಳು ಇಲ್ಲದ ಕಾರಣ ಮಳೆ ಆಶ್ರಿತವಾಗಿಯೇ ರಾಗಿ ಇತರೆ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಮಳೆ ಆಶ್ರಿತ ಬೆಳೆಗಳೇ ಅಧಿಕವಾಗಿದೆ. ಜಿಲ್ಲೆಯ ರೈತರ ಮುಖದಲ್ಲಿ ಸಂತಸ ಮೂಡಿದ್ದು, ಜಿಲ್ಲೆಯಲ್ಲಿ ಒಣಗಿದ್ದ ಬೆಳೆ ಈಗ ಕಳೆಕಟ್ಟಿದೆ. ಕೆಲಕೆರೆಗಳು ಕೋಡಿ ಬಿದ್ದಿವೆ. ಕೆರೆ ಕಟ್ಟೆ, ಹಳ್ಳಕೊಳ್ಳ, ಕೃಷಿಹೊಂಡ, ಕುಂಟೆಗಳಲ್ಲಿ ಮಳೆಯಿಂದ ನೀರು ತುಂಬಿವೆ.
ಮಳೆಯಿಂದ ಅನುಕೂಲವಾಗಿದ್ದು ರೈತರ ಮೊಗದಲ್ಲಿ ಸಂತಸ ಮೂಡಿದೆ. ಇದೇ ರೀತಿ ಮಳೆ ಬಂದರೆ ರಾಗಿ ಬೆಳೆ ಬಂಪರ್‌ ಬರಲಿದೆ. ರೈತರು ಪ್ರತಿವರ್ಷವೂ ರಾಗಿಬೆಳೆಯನ್ನೇ ನಂಬಿ ಕಾಲಕಾಲಕ್ಕೆ ಮಳೆರಾಯ ಕೃಪೆ ತೋರಬೇಕೆಂದು ಮಳೆಗಾಗಿ ದೇವರ ಮೊರೆ ಹೋಗುತ್ತಾರೆ. ಇದೀಗ ಅಕ್ಟೋಬರ್‌ ಮೊದಲ ವಾರದಿಂದ ಬರುತ್ತಿರುವ ಹದ ಮಳೆಗೆ ಉತ್ತಮ ಬೆಳೆಗಳು ಎಲ್ಲೆಲ್ಲೂ ಹಚ್ಚಹಸಿರಿನಿಂದ ಕಂಗೊಳಿಸುತ್ತಿದೆ. ಸರ್ಕಾರ ರಾಗಿಗೆ ಬೆಂಬಲ ಬೆಲೆ ನಿಗದಿಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ, ಪ್ರಧಾನಿ ಮೋದಿ, ಡೊನಾಲ್ಡ್ ಟ್ರಂಪ್

ಕಾಂಗ್ರೆಸ್ ನಲ್ಲಿ ಅಧಿಕಾರಿಗಳ ಸಾವಿಗೂ ಗ್ಯಾರಂಟಿ: ಆರ್ ಅಶೋಕ್

ಪ್ರಿಯಾಂಕ್ ಖರ್ಗೆಯನ್ನು ನಿಂದಿಸುವುದು ಸಭ್ಯತೆಯಲ್ಲ, ಅವರ ಜೊತೆ ನಾವಿದ್ದೇವೆ: ಕೃಷ್ಣಭೈರೇಗೌಡ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಯಾರಿಗೆ ಬಿಪಿ, ಶುಗರ್, ಹೃದಯ ಸಮಸ್ಯೆ ಬರುವ ಸಾಧ್ಯತೆ ಹೆಚ್ಚು: ಡಾ ಸಿಎನ್ ಮಂಜುನಾಥ್

ಮುಂದಿನ ಸುದ್ದಿ
Show comments