Webdunia - Bharat's app for daily news and videos

Install App

ಭತ್ತದ ಗದ್ದೆಗೆ ನುಗ್ಗುತ್ತಿರುವ ಗುಡ್ಡದ ಮಣ್ಣು: ಬೆಳೆಗಾರ ಕಂಗಾಲು

Webdunia
ಮಂಗಳವಾರ, 21 ಆಗಸ್ಟ್ 2018 (15:15 IST)
ಆ ಗ್ರಾಮದ ಸುಮಾರು 25 ಎಕರೆ ಭತ್ತದ ಗದ್ದೆಗೆ ಗುಡ್ಡದ ಮಣ್ಣು ಜಾರಿ ಬೆಳೆ ಸಂಪೂರ್ಣ ಹಾನಿಯಾಗಿದೆ. ತಿಂಗಳಿಂದ ಮಡಿ ಮಾಡಿ, ಸಸಿ ನೆಟ್ಟಿದ್ದ ರೈತರೀಗ ಆತಂಕಕ್ಕೀಡಾಗಿದ್ದಾರೆ.

 
ಶೃಂಗೇರಿಯ ಕಿಗ್ಗಾ, ಕೆರೆಕಟ್ಟೆ ಭಾಗದಲ್ಲಿ ಸುರಿಯುತ್ತಿರೋ ಗಾಳಿ-ಮಳೆಯಿಂದಾಗಿ ತಾಲೂಕಿನ ಕೆರೆಕಟ್ಟೆ ಸಮೀಪದ ಹುಲುಗಾರುಬೈಲು ಗ್ರಾಮದ ಸುಮಾರು 25 ಎಕರೆ ಭತ್ತದ ಗದ್ದೆಗೆ ಗುಡ್ಡದ ಮಣ್ಣು ಜಾರಿ ಬೆಳೆ ಸಂಪೂರ್ಣ ಹಾನಿಯಾಗಿದೆ.

ಮಳೆ ಪ್ರಮಾಣ ಸ್ವಲ್ಪ ಮಟ್ಟಿಗೆ ತಗ್ಗಿದ್ದರೂ, ಭಾರೀ ಗಾಳಿಯೊಂದಿಗೆ ಸುರಿಯುತ್ತಿರೋ ಸೋನೆ ಮಳೆಯಿಂದ ಗುಡ್ಡದ ಮಣ್ಣು ಸವೆದು ಇಡೀ ಜಮೀನುಗಳಿಗೆ ಆವರಿಸಿಕೊಂಡಿದೆ. ತಿಂಗಳಿಂದ ಮಡಿ ಮಾಡಿ, ಸಸಿ ನೆಟ್ಟಿದ್ದ ರೈತರೀಗ ಆತಂಕಕ್ಕೀಡಾಗಿದ್ದಾರೆ. ಮರಾಠಿ ಜನಾಂಗಕ್ಕೆ ಸೇರಿದ ಇಲ್ಲಿನ ರೈತರು ಮೂಲತಃ ಮಂಗಳೂರಿನವರು. ಬೈನೆ ಮರದ ಕಳ್ಳನ್ನ ಸಂಗ್ರಹಿಸಿ, ಅಡಕೆ ಕೊಯ್ಯುವುದರಲ್ಲಿ ಇವರು ನಿಸ್ಸಿಮರು. ಈಗಲೂ ಅದೇ ಕೆಲಸ ಮಾಡಿಕೊಂಡು ಭೂ ಸುಧಾರಣೆ ಕಾಯ್ದೆಯಡಿ ಅರ್ಧ, ಒಂದು ಎಕರೆ ಜಮೀನಿನಲ್ಲಿ ಮನೆಗೆ ಬೇಕಾದ ಭತ್ತ ಬೆಳೆದುಕೊಂಡು ಜೀವನ ಸಾಗಿಸ್ತಾರೆ.

ಈ ಬಾರಿ ಸುರಿಯುತ್ತಿರುವ ಭಾರೀ ಮಳೆಯಿಂದ ಭತ್ತವೆಲ್ಲಾ ಮಣ್ಣು ಪಾಲಾದ ಹಿನ್ನೆಲೆ ಭವಿಷ್ಯದ ಬಗ್ಗೆ ಆತಂಕಕ್ಕೀಡಾಗಿದ್ದಾರೆ. ಕೂಡಲೇ ಸರ್ಕಾರ ನಮ್ಮ ನೆರವಿಗೆ ಧಾವಿಸಬೇಕೆಂದು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿರೋ ಶೃಂಗೇರಿ ತಹಶೀಲ್ದಾರ್ ಸ್ಥಳ ಪರಿಶೀಲನೆ ನಡೆಸಿ, ಸರ್ಕಾರಕ್ಕೆ ವರದಿ ನೀಡಿ ಇಲ್ಲಿನ ರೈತರಿಗೆ ಪರಿಹಾರ ಕೊಡಿಸೋ ಭರವಸೆ ನೀಡಿದ್ದಾರೆ. 




ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments