Publish Date: Thu, 23 Mar 2023 (19:50 IST)
Updated Date: Thu, 23 Mar 2023 (19:16 IST)
ಬಿಜೆಪಿ ಸರ್ಕಾರ ಎಸ್ಸಿ ,ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ ಈ ಹಿನ್ನೆಲೆ ಕಾಂಗ್ರೆಸ್ ಪಕ್ಷದಿಂದ ರಾಜಭವನ ಚಲೋ ಹಮ್ಮಿಕೊಂಡಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಹೇಳಿದರು.ಈ ಬಗ್ಗೆ ಮಾತನಾಡಿದ ಅವರು ಬಿಜೆಪಿ ಸರ್ಕಾರ ಎಸ್ಸಿ ,ಎಸ್ಟಿ ಸಮುದಾಯಕ್ಕೆ ಮೋಸ ಮಾಡಿದೆ.ಕೇಂದ್ರ ಸರ್ಕಾರಕ್ಕೆ ಮೀಸಲಾತಿ ಪ್ರಸ್ತಾಪ ಹೋಗಿಲ್ಲ.ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರದ ಯಾವುದೇ ಮೀಸಲಾತಿ ಪ್ರಾಸ್ತಾವನೇ ಕಳಿಸಿಲ್ಲ.ಒಂದು ವೇಳೆ ಸರ್ಕಾರ ಮೀಸಲಾತಿ ವಿಚಾರ ಕೇಂದ್ರಕ್ಕೆ ಕಳುಹಿಸಿದರೇ ಅಲ್ಲಿ ಚರ್ಚೆ ಆಗಬೇಕು ಅಲ್ವಾ.ಪಾರ್ಲಿಮೆಂಟ್ ಸೆಷನ್ ನಡಿತೀದೆ..ಮೀಸಲಾತಿ ಬಗ್ಗೆ ಯಾಕೆ ಸದನದಲ್ಲಿ ಚರ್ಚೆ ಆಗ್ತಿಲ್ಲ..? ಮೀಸಲಾತಿ ವಿಚಾರದಲ್ಲಿ ಸರ್ಕಾರ ಮಾಡಿದ ಅನ್ಯಾಯದ ಕುರಿತು ನಾಳೆ ಕಾಂಗ್ರೆಸ್ ನಾಯಕರು ಕಾರ್ಯಕರ್ತರು ಬೆಳಿಗ್ಗೆ 10 ಗಂಟೆಗೆ ರಾಜಭವನ ಚಲೋ ಮಾಡುತ್ತಿದ್ದೇವೆ ಎಂದು ಹೇಳಿದರು.